ಕೃಷಿ ಆರ್ಥಿಕ ತಜ್ಞ ಪ್ರಕಾಶ್ ಕಮ್ಮರಡಿ ಮಾತನಾಡಿ, ‘ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್ಎಸ್ಒ) ಮೂರು–ನಾಲ್ಕು ವರ್ಷಗಳ ಹಿಂದೆ ನಡೆಸಿದ ಸಮೀಕ್ಷೆ ಪ್ರಕಾರ ದೇಶದಲ್ಲಿ 10 ಕೋಟಿಗಿಂತ ಹೆಚ್ಚು ರೈತ ಕುಟುಂಬಗಳಿದ್ದು, ಪ್ರತಿ ಕುಟುಂಬದ ಮೇಲೆ ಸರಾಸರಿ ₹1.70 ಲಕ್ಷ ಸಾಲವಿದೆ. ಐದು ವರ್ಷಗಳಿಗೊಮ್ಮೆ ಶೇಕಡಾ 60ರಷ್ಟು ಹೆಚ್ಚಾಗಿದೆ. ನಿಜವಾದ ಸಾಲ ಮನ್ನಾಗೆ ಇವರು ಅರ್ಹರು. ಬೆಂಬಲ ಬೆಲೆ ನೀತಿ ಜಾರಿಗೊಳಿಸಿ ಕಾನೂನು ಸ್ವರೂಪ ನೀಡಬೇಕು. ಬೀಜ, ರಸಗೊಬ್ಬರ ಮತ್ತು ಕ್ರಿಮಿನಾಶಕವನ್ನು ಉಚಿತವಾಗಿ ನೀಡಬೇಕು’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.