‘ಪರಿಶಿಷ್ಟ ಜಾತಿಗಳಲ್ಲಿನ ಮೀಸಲಾತಿಯ ತಾರತಮ್ಯತೆ ನಿವಾರಣೆಗಾಗಿ ನ್ಯಾ.ಸದಾಶಿವ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿತ್ತು. ಈ ಬಗ್ಗೆ 2012ರಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರೂ, ಅದನ್ನು ಜಾರಿ ಮಾಡಲು ಸರ್ಕಾರಗಳು ಆಸಕ್ತಿ ತೋರಿಸಿಲ್ಲ’ ಎಂದು ಸಮಿತಿಯ ಕಾರ್ಯಾಧ್ಯಕ್ಷ ಬಿ.ಎ. ಕೇಶವಮೂರ್ತಿ ಬೇಸರ ವ್ಯಕ್ತಪಡಿಸಿದರು.