<p><strong>ಬೆಂಗಳೂರು</strong>: ‘ಡಿಎಚ್ ಚೇಂಜ್ಮೇಕರ್ನ ಸಾಧಕರನ್ನು ನೋಡಿ, ಅವರ ಜೀವನವನ್ನು ಅರಿತುಕೊಂಡ ಮೇಲೆ ಬದಲಾವಣೆ ತರುವುದು ಹೇಗೆ ಎಂಬುದರ ಅರ್ಥ ನನಗೆ ತಿಳಿಯಿತು’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹೇಳಿದರು.</p>.<p>‘ಡೆಕ್ಕನ್ ಹೆರಾಲ್ಡ್ ಚೇಂಜ್ಮೇಕರ್ಸ್ 2024’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ನಮ್ಮ ಸಂವಿಧಾನದ ತತ್ವಗಳಾದ ಸಮಾನತೆ, ಸಬಲೀಕರಣ, ಸಾಮಾಜಿಕ ಪರಿವರ್ತನೆ, ಮಕ್ಕಳ ಆರೈಕೆ, ಅಸಮಾನತೆ ನಿವಾರಣೆ, ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿತಗೊಳಿಸುವ ಕ್ರಿಯಾಶೀಲನೆ ಈ 15 ಚೇಂಜ್ಮೇಕರ್ಸ್ ಅವರ ಸಾಧನೆಯಲ್ಲಿದೆ’ ಎಂದು ಶ್ಲಾಘಿಸಿದರು.</p>.<p>ಕಾನೂನು ವಿದ್ಯಾರ್ಥಿಯಾಗಿದ್ದಾಗಿನ ತಮ್ಮ ಅನುಭವವನ್ನು ಸ್ಮರಿಸಿಕೊಂಡ ಬಿ.ಎಸ್. ಪಾಟೀಲ್, ‘ಪ್ರತಿಯೊಬ್ಬ ಪ್ರಜೆಯೂ ಉತ್ಕೃಷ್ಟತೆಯನ್ನು ಸಾಧಿಸಲು ನಿರಂತರವಾಗಿ ಶ್ರಮಿಸಬೇಕು ಎಂದು ನಮ್ಮ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ವೈಯಕ್ತಿಕ ಸಾಧನೆಯ ಶ್ರೇಷ್ಠತೆಯು ಸಾಮೂಹಿಕ ಶ್ರೇಷ್ಠತೆಯತ್ತ ಸಾಗಿ ದೇಶವನ್ನು ಪ್ರಗತಿಯನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ’ ಎಂದು ಹೇಳಿದರು.</p>.<p>‘40ಕ್ಕಿಂತ ಕಡಿಮೆ ವಯಸ್ಸಿನವರು ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸಿರುವುದು ಮತ್ತು ಅವರನ್ನು ಗುರುತಿಸಿರುವುದು ಹೆಮ್ಮೆಯ ಸಂಗತಿ’ ಎಂದು ಬೆಂಗಳೂರು ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್. ಅನುಚೇತ್ ಅವರು ಹರ್ಷ ವ್ಯಕ್ತಪಡಿಸಿದರು.</p>.<p>‘ಸಮಾಜದ ಕಟ್ಟುಪಾಡುಗಳನ್ನು ಮೀರಿ ಸಾಧನೆ ಮಾಡಿದ ಜನರನ್ನು ಗುರುತಿಸಿ, ಸನ್ಮಾನಿಸಿರುವುದು ಉತ್ತಮವಾದ ಕಾರ್ಯ’ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಹೇಳಿದರು.</p>.<p>‘ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತಂದ ಜನರನ್ನು ಗುರುತಿಸಿ ಪ್ರಶಂಸಿಸುವುದು ಅತ್ಯಂತ ದೊಡ್ಡ ಕಾರ್ಯವಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಡಿಎಚ್ ಚೇಂಜ್ಮೇಕರ್ನ ಸಾಧಕರನ್ನು ನೋಡಿ, ಅವರ ಜೀವನವನ್ನು ಅರಿತುಕೊಂಡ ಮೇಲೆ ಬದಲಾವಣೆ ತರುವುದು ಹೇಗೆ ಎಂಬುದರ ಅರ್ಥ ನನಗೆ ತಿಳಿಯಿತು’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹೇಳಿದರು.</p>.<p>‘ಡೆಕ್ಕನ್ ಹೆರಾಲ್ಡ್ ಚೇಂಜ್ಮೇಕರ್ಸ್ 2024’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ನಮ್ಮ ಸಂವಿಧಾನದ ತತ್ವಗಳಾದ ಸಮಾನತೆ, ಸಬಲೀಕರಣ, ಸಾಮಾಜಿಕ ಪರಿವರ್ತನೆ, ಮಕ್ಕಳ ಆರೈಕೆ, ಅಸಮಾನತೆ ನಿವಾರಣೆ, ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿತಗೊಳಿಸುವ ಕ್ರಿಯಾಶೀಲನೆ ಈ 15 ಚೇಂಜ್ಮೇಕರ್ಸ್ ಅವರ ಸಾಧನೆಯಲ್ಲಿದೆ’ ಎಂದು ಶ್ಲಾಘಿಸಿದರು.</p>.<p>ಕಾನೂನು ವಿದ್ಯಾರ್ಥಿಯಾಗಿದ್ದಾಗಿನ ತಮ್ಮ ಅನುಭವವನ್ನು ಸ್ಮರಿಸಿಕೊಂಡ ಬಿ.ಎಸ್. ಪಾಟೀಲ್, ‘ಪ್ರತಿಯೊಬ್ಬ ಪ್ರಜೆಯೂ ಉತ್ಕೃಷ್ಟತೆಯನ್ನು ಸಾಧಿಸಲು ನಿರಂತರವಾಗಿ ಶ್ರಮಿಸಬೇಕು ಎಂದು ನಮ್ಮ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ವೈಯಕ್ತಿಕ ಸಾಧನೆಯ ಶ್ರೇಷ್ಠತೆಯು ಸಾಮೂಹಿಕ ಶ್ರೇಷ್ಠತೆಯತ್ತ ಸಾಗಿ ದೇಶವನ್ನು ಪ್ರಗತಿಯನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ’ ಎಂದು ಹೇಳಿದರು.</p>.<p>‘40ಕ್ಕಿಂತ ಕಡಿಮೆ ವಯಸ್ಸಿನವರು ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸಿರುವುದು ಮತ್ತು ಅವರನ್ನು ಗುರುತಿಸಿರುವುದು ಹೆಮ್ಮೆಯ ಸಂಗತಿ’ ಎಂದು ಬೆಂಗಳೂರು ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್. ಅನುಚೇತ್ ಅವರು ಹರ್ಷ ವ್ಯಕ್ತಪಡಿಸಿದರು.</p>.<p>‘ಸಮಾಜದ ಕಟ್ಟುಪಾಡುಗಳನ್ನು ಮೀರಿ ಸಾಧನೆ ಮಾಡಿದ ಜನರನ್ನು ಗುರುತಿಸಿ, ಸನ್ಮಾನಿಸಿರುವುದು ಉತ್ತಮವಾದ ಕಾರ್ಯ’ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಹೇಳಿದರು.</p>.<p>‘ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತಂದ ಜನರನ್ನು ಗುರುತಿಸಿ ಪ್ರಶಂಸಿಸುವುದು ಅತ್ಯಂತ ದೊಡ್ಡ ಕಾರ್ಯವಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>