<p><strong>ತುಮಕೂರು: </strong>‘ಜ್ಞಾನಾರ್ಜನೆಯ ಶಿಕ್ಷಣಕ್ಕಿಂತ, ಉದ್ಯೋಗಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಮಾನ್ಯತೆ ದೊರೆತಿದೆ. ಅನೇಕ ವಿಷಯಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯದೇ ಇರುವುದರಿಂದ ಕೋರ್ಸ್ ಮುಚ್ಚುವ ಸ್ಥಿತಿ ಎದುರಾಗಿದೆ’ ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾ ವಿಭಾಗ ಕುಲಸಚಿವ ಪ್ರೊ.ಕೆ.ಜಿ.ಸುರೇಶ್ ಹೇಳಿದರು.</p>.<p>ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಅಧ್ಯಾಪಕರ ಸಂಘವು ‘ಗುಣಮಟ್ಟದ ಉನ್ನತ ಶಿಕ್ಷಣ ಕಡೆಗೆ ಒಂದು ಹೆಜ್ಜೆ ಮತ್ತು ಸವಾಲುಗಳು’ ಎಂಬ ವಿಷಯ ಕುರಿತು ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ತತ್ವಜ್ಞಾನಿಗಳಿಗಿಂತ, ಉದ್ಯೋಗಸ್ಥರನ್ನು ಸೃಷ್ಟಿಸಲಷ್ಟೆ ಶಿಕ್ಷಣ ಬಳಕೆಯಾಗುತ್ತಿದೆ. ಇದನ್ನು ಬದಲಾಯಿಸುವ ನಿಟ್ಟಿನಲ್ಲಿ ಅಧ್ಯಾಪಕರು ಮನಸ್ಸು ಮಾಡಬೇಕಿದೆ’ ಎಂದು ಹೇಳಿದರು.</p>.<p>ಮಾಹಿತಿ, ಆವಿಷ್ಕಾರ, ಸಂಶೋಧನೆ, ಕೌಶಲ ಅಂಶಗಳನ್ನೊಳಗೊಂಡ ಸಮಗ್ರ ಶಿಕ್ಷಣ ಅವಶ್ಯಕವಾಗಿದೆ ಎಂದು ಪ್ರತಿಪಾದಿಸಿದರು.</p>.<p>‘ಉನ್ನತ ಶಿಕ್ಷಣ ಸುಧಾರಣಾ ಆಯೋಗಗಳ ಶಿಫಾರಸ್ಸುಗಳು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ ಶಿಕ್ಷಣ ನೀತಿಗೆ ಅನುಗುಣವಾಗಿವೆ. ಇವುಗಳನ್ನು ಒಳಗೊಂಡ ಜ್ಞಾನವಂತ ವಿದ್ಯಾರ್ಥಿಗಳನ್ನು ಬೆಳೆಸುವ ಗುರುತರ ಜವಾಬ್ದಾರಿ ಅಧ್ಯಾಪಕರ ಮೇಲಿದೆ’ ಎಂದು ಹೇಳಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿ ನ್ಯಾಕ್ ಸಮಿತಿ ಸಂಚಾಲಕರಾಗಿದ್ದ ಡಾ.ಸಿದ್ದಲಿಂಗಸ್ವಾಮಿ ಭಾಗವಹಿಸಿದ್ದರು. ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜಗದೀಶ್, ತುಮಕೂರು ವಿ.ವಿ. ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಡಿ.ಆರ್.ಮೋಹನ್ಕುಮಾರ್, ಕಾರ್ಯದರ್ಶಿ ಪುಟ್ಟರಾಜು, ಖಜಾಂಚಿ ಡಾ.ಪ್ರಸನ್ನ, ಮಾಜಿ ಅಧ್ಯಕ್ಷರಾದ ಜಿ.ತಿಪ್ಪೇಸ್ವಾಮಿ, ಪ್ರೊ.ಎಚ್.ವಿ.ವೇಣುಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ಜ್ಞಾನಾರ್ಜನೆಯ ಶಿಕ್ಷಣಕ್ಕಿಂತ, ಉದ್ಯೋಗಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಮಾನ್ಯತೆ ದೊರೆತಿದೆ. ಅನೇಕ ವಿಷಯಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯದೇ ಇರುವುದರಿಂದ ಕೋರ್ಸ್ ಮುಚ್ಚುವ ಸ್ಥಿತಿ ಎದುರಾಗಿದೆ’ ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾ ವಿಭಾಗ ಕುಲಸಚಿವ ಪ್ರೊ.ಕೆ.ಜಿ.ಸುರೇಶ್ ಹೇಳಿದರು.</p>.<p>ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಅಧ್ಯಾಪಕರ ಸಂಘವು ‘ಗುಣಮಟ್ಟದ ಉನ್ನತ ಶಿಕ್ಷಣ ಕಡೆಗೆ ಒಂದು ಹೆಜ್ಜೆ ಮತ್ತು ಸವಾಲುಗಳು’ ಎಂಬ ವಿಷಯ ಕುರಿತು ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ತತ್ವಜ್ಞಾನಿಗಳಿಗಿಂತ, ಉದ್ಯೋಗಸ್ಥರನ್ನು ಸೃಷ್ಟಿಸಲಷ್ಟೆ ಶಿಕ್ಷಣ ಬಳಕೆಯಾಗುತ್ತಿದೆ. ಇದನ್ನು ಬದಲಾಯಿಸುವ ನಿಟ್ಟಿನಲ್ಲಿ ಅಧ್ಯಾಪಕರು ಮನಸ್ಸು ಮಾಡಬೇಕಿದೆ’ ಎಂದು ಹೇಳಿದರು.</p>.<p>ಮಾಹಿತಿ, ಆವಿಷ್ಕಾರ, ಸಂಶೋಧನೆ, ಕೌಶಲ ಅಂಶಗಳನ್ನೊಳಗೊಂಡ ಸಮಗ್ರ ಶಿಕ್ಷಣ ಅವಶ್ಯಕವಾಗಿದೆ ಎಂದು ಪ್ರತಿಪಾದಿಸಿದರು.</p>.<p>‘ಉನ್ನತ ಶಿಕ್ಷಣ ಸುಧಾರಣಾ ಆಯೋಗಗಳ ಶಿಫಾರಸ್ಸುಗಳು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ ಶಿಕ್ಷಣ ನೀತಿಗೆ ಅನುಗುಣವಾಗಿವೆ. ಇವುಗಳನ್ನು ಒಳಗೊಂಡ ಜ್ಞಾನವಂತ ವಿದ್ಯಾರ್ಥಿಗಳನ್ನು ಬೆಳೆಸುವ ಗುರುತರ ಜವಾಬ್ದಾರಿ ಅಧ್ಯಾಪಕರ ಮೇಲಿದೆ’ ಎಂದು ಹೇಳಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿ ನ್ಯಾಕ್ ಸಮಿತಿ ಸಂಚಾಲಕರಾಗಿದ್ದ ಡಾ.ಸಿದ್ದಲಿಂಗಸ್ವಾಮಿ ಭಾಗವಹಿಸಿದ್ದರು. ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜಗದೀಶ್, ತುಮಕೂರು ವಿ.ವಿ. ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಡಿ.ಆರ್.ಮೋಹನ್ಕುಮಾರ್, ಕಾರ್ಯದರ್ಶಿ ಪುಟ್ಟರಾಜು, ಖಜಾಂಚಿ ಡಾ.ಪ್ರಸನ್ನ, ಮಾಜಿ ಅಧ್ಯಕ್ಷರಾದ ಜಿ.ತಿಪ್ಪೇಸ್ವಾಮಿ, ಪ್ರೊ.ಎಚ್.ವಿ.ವೇಣುಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>