<p><strong>ಬೆಂಗಳೂರು: </strong>ನಗರದಲ್ಲಿ ನೆಲೆಸಿರುವ ಬೇರ ಊರಿನ ಜನರು, ದೀಪಾವಳಿ ಹಬ್ಬ ಆಚರಣೆಗಾಗಿ ಶುಕ್ರವಾರ ರಾತ್ರಿಯೇ ತಮ್ಮೂರಿನತ್ತ ಹೊರಟರು. ಸಾರಿಗೆ ನಿಗಮ ಬಸ್, ಖಾಸಗಿ ಬಸ್ ಹಾಗೂ ಖಾಸಗಿ ವಾಹನಗಳ ಸಂಚಾರ ಹೆಚ್ಚಿದ್ದರಿಂದ ಹಲವೆಡೆ ಸಂಚಾರ ದಟ್ಟಣೆ ಕಂಡುಬಂತು.</p>.<p>ಶನಿವಾರದಿಂದ ಸರಣಿ ರಜೆ ಇರುವುದರಿಂದ ಹಬ್ಬಕ್ಕೂ ಮುನ್ನಾದಿನವೇ ಬಹುತೇಕ ಜನ ಊರಿನತ್ತ ತೆರಳಿದರು. ಸಂಜೆಯಿಂದಲೇ ಮೆಜೆಸ್ಟಿಕ್ ಬಸ್ ನಿಲ್ದಾಣಗಳತ್ತ ಬರಲಾರಂಭಿಸಿದ್ದರು. ಲಗೇಜು ಸಮೇತ ಗುಂಪು ಗುಂಪಾಗಿ ನಿಂತಿದ್ದು ಕಂಡುಬಂತು.</p>.<p>ನಗರದ ಬೇರೆ ಬೇರೆ ಪ್ರದೇಶಗಳಿಂದ ಜನ ವಾಹನಗಳಲ್ಲಿ ಮೆಜೆಸ್ಟಿಕ್ಗೆ ಬಂದಿದ್ದರು. ವಾಹನಗಳ ಸಂಖ್ಯೆ ಹೆಚ್ಚಾಗಿ ದಟ್ಟಣೆ ಉಂಟಾಯಿತು. ನಗರದಿಂದ ಬೇರೆ ಊರುಗಳಿಗೆ ಹೊರಟಿದ್ದ ಬಸ್ಗಳು ದಟ್ಟಣೆಯಲ್ಲಿ ಸಿಲುಕಿದ್ದವು.</p>.<p>ಚಾಲುಕ್ಯ ವೃತ್ತ, ಆನಂದರಾವ್ ವೃತ್ತ, ಮೈಸೂರು ರಸ್ತೆ, ಯಶವಂತಪುರ, ಆರ್ಎಂಸಿ ಯಾರ್ಡ್, ತುಮಕೂರು ರಸ್ತೆ, ಹೊಸೂರು ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಇತ್ತು.</p>.<p>ಲಾಕ್ಡೌನ್ ತೆರವಾದ ನಂತರ ಖಾಸಗಿ ಬಸ್ಗಳ ಓಡಾಟ ಆರಂಭವಾಗಿದ್ದು, ನಿಗದಿಯಷ್ಟು ಬಸ್ ಸಂಚರಿಸುತ್ತಿಲ್ಲ. ಕೆಎಸ್ಆರ್ಟಿಸಿಯಿಂದ 1 ಸಾವಿರ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರ್ಗಿ ಹಾಗೂ ಇತರೆ ನಗರಗಳಿಗೆ ಹೋಗುವವರ ಸಂಖ್ಯೆಯೇ ಹೆಚ್ಚಿತ್ತು.</p>.<p>ನೆಲಮಂಗಲ, ದೇವನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ಟೋಲ್ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದಾಗಿ ಪ್ರಯಾಣಿಕರು ನಗರ ದಾಟಲು ಸಾಕಷ್ಟು ಸಮಯ ಬೇಕಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ನೆಲೆಸಿರುವ ಬೇರ ಊರಿನ ಜನರು, ದೀಪಾವಳಿ ಹಬ್ಬ ಆಚರಣೆಗಾಗಿ ಶುಕ್ರವಾರ ರಾತ್ರಿಯೇ ತಮ್ಮೂರಿನತ್ತ ಹೊರಟರು. ಸಾರಿಗೆ ನಿಗಮ ಬಸ್, ಖಾಸಗಿ ಬಸ್ ಹಾಗೂ ಖಾಸಗಿ ವಾಹನಗಳ ಸಂಚಾರ ಹೆಚ್ಚಿದ್ದರಿಂದ ಹಲವೆಡೆ ಸಂಚಾರ ದಟ್ಟಣೆ ಕಂಡುಬಂತು.</p>.<p>ಶನಿವಾರದಿಂದ ಸರಣಿ ರಜೆ ಇರುವುದರಿಂದ ಹಬ್ಬಕ್ಕೂ ಮುನ್ನಾದಿನವೇ ಬಹುತೇಕ ಜನ ಊರಿನತ್ತ ತೆರಳಿದರು. ಸಂಜೆಯಿಂದಲೇ ಮೆಜೆಸ್ಟಿಕ್ ಬಸ್ ನಿಲ್ದಾಣಗಳತ್ತ ಬರಲಾರಂಭಿಸಿದ್ದರು. ಲಗೇಜು ಸಮೇತ ಗುಂಪು ಗುಂಪಾಗಿ ನಿಂತಿದ್ದು ಕಂಡುಬಂತು.</p>.<p>ನಗರದ ಬೇರೆ ಬೇರೆ ಪ್ರದೇಶಗಳಿಂದ ಜನ ವಾಹನಗಳಲ್ಲಿ ಮೆಜೆಸ್ಟಿಕ್ಗೆ ಬಂದಿದ್ದರು. ವಾಹನಗಳ ಸಂಖ್ಯೆ ಹೆಚ್ಚಾಗಿ ದಟ್ಟಣೆ ಉಂಟಾಯಿತು. ನಗರದಿಂದ ಬೇರೆ ಊರುಗಳಿಗೆ ಹೊರಟಿದ್ದ ಬಸ್ಗಳು ದಟ್ಟಣೆಯಲ್ಲಿ ಸಿಲುಕಿದ್ದವು.</p>.<p>ಚಾಲುಕ್ಯ ವೃತ್ತ, ಆನಂದರಾವ್ ವೃತ್ತ, ಮೈಸೂರು ರಸ್ತೆ, ಯಶವಂತಪುರ, ಆರ್ಎಂಸಿ ಯಾರ್ಡ್, ತುಮಕೂರು ರಸ್ತೆ, ಹೊಸೂರು ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಇತ್ತು.</p>.<p>ಲಾಕ್ಡೌನ್ ತೆರವಾದ ನಂತರ ಖಾಸಗಿ ಬಸ್ಗಳ ಓಡಾಟ ಆರಂಭವಾಗಿದ್ದು, ನಿಗದಿಯಷ್ಟು ಬಸ್ ಸಂಚರಿಸುತ್ತಿಲ್ಲ. ಕೆಎಸ್ಆರ್ಟಿಸಿಯಿಂದ 1 ಸಾವಿರ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರ್ಗಿ ಹಾಗೂ ಇತರೆ ನಗರಗಳಿಗೆ ಹೋಗುವವರ ಸಂಖ್ಯೆಯೇ ಹೆಚ್ಚಿತ್ತು.</p>.<p>ನೆಲಮಂಗಲ, ದೇವನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ಟೋಲ್ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದಾಗಿ ಪ್ರಯಾಣಿಕರು ನಗರ ದಾಟಲು ಸಾಕಷ್ಟು ಸಮಯ ಬೇಕಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>