ಸಂಸ್ಥೆಯ ಉಪಾಧ್ಯಕ್ಷ ಡಾ. ನರೇನ್ ಶೆಟ್ಟಿ, ‘ಕಣ್ಣಿನ ಬಿಳಿ ಭಾಗ ಕೆಂಪಾಗುವುದು, ಕಣ್ಣುಗಳಲ್ಲಿ ಉರಿ ಮತ್ತು ನೋವು, ಕಣ್ಣಿನ ತುರಿಕೆ, ಕಣ್ಣುಗಳಲ್ಲಿ ನಿರಂತರ ನೀರು ಬರುವಿಕೆ, ಕಣ್ಣುಗಳು ಊದಿಕೊಳ್ಳುವುದು ‘ಮದ್ರಾಸ್ ಐ’ ಸಮಸ್ಯೆಯ ಪ್ರಮುಖ ಲಕ್ಷಣಗಳಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಜನರು ಇರುವ ಪ್ರದೇಶಗಳಿಗೆ ಹೋಗುವುದನ್ನು ಕಡಿಮೆ ಮಾಡಬೇಕು. ಪದೇ ಪದೇ ಕಣ್ಣುಗಳನ್ನು ಮುಟ್ಟಿಕೊಳ್ಳಬಾರದು. ಸೋಪುಗಳಲ್ಲಿ ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು. ಸಮಸ್ಯೆ ಇರುವವರು ಉಪಯೋಗಿಸಿದ ಟವೆಲ್ ಸೇರಿ ವಿವಿಧ ವಸ್ತುಗಳನ್ನು ಬಳಸಬಾರದು’ ಎಂದು ತಿಳಿಸಿದರು.