<p>ಬೆಂಗಳೂರು: ‘ಗುರುತರ ಆರೋಪ ಗಳಲ್ಲಿ ವಿಚಾರಣೆ ಎದುರಿಸುತ್ತಿರುವ ಅಧಿಕಾರಿಗಳನ್ನು ರಕ್ಷಿಸಲು ‘ವಿಳಂಬ’ ಅಸ್ತ್ರವನ್ನು ಅರಣ್ಯ ಇಲಾಖೆ ಅನುಸರಿಸುತ್ತಿದೆ’ ಎಂಬ ಆರೋಪ ಕೇಳಿಬಂದಿದೆ.</p>.<p>ವಿಚಾರಣಾ ಪ್ರಕ್ರಿಯೆಯನ್ನು ಮೂರ್ನಾಲ್ಕು ವರ್ಷ ವಿಳಂಬ ಮಾಡಿ, ಅವುಗಳ ಗಂಭೀರತೆ ಕಡಿಮೆಯಾದ ಬಳಿಕ ಮುಚ್ಚಿ ಹಾಕುವ ಪ್ರಯತ್ನಗಳು ಸದ್ದಿಲ್ಲದೆ ನಡೆಯುತ್ತಿವೆ’ ಎಂದು ಇಲಾಖೆಯ ನಿವೃತ್ತಿ ಅಧಿಕಾರಿಗಳು ಆಪಾದಿಸಿದ್ದಾರೆ.</p>.<p>‘ಇಲಾಖಾ ವಿಚಾರಣೆ ಎಂಬುದು ಅರಣ್ಯ ಇಲಾಖೆಯಲ್ಲಿ ನಪಮಾತ್ರಕ್ಕೆ ಎಂಬಂತಾಗಿದೆ. ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಉಳಿದುಕೊಂಡಿವೆ. ಈ ರೀತಿ ವಿಳಂಬ ಮಾಡುವ ಮೂಲಕ ಗುರುತರ ಆರೋಪದ ಪ್ರಕರಣಗಳಲ್ಲಿ ಅಧಿಕಾರಿಗಳಿಗೆ ಅನುಕೂಲ ಮಾಡಿಕೊಟ್ಟರೆ, ಕ್ಷುಲ್ಲಕ ಆರೋಪಗಳನ್ನು ಹೊತ್ತ ಅಧಿಕಾರಿಗಳಿಗೆ ಅನಗತ್ಯ ಕಿರುಕುಳವನ್ನೂ ನೀಡಲಾಗುತ್ತಿದೆ’ ಎಂದು ಹೆಸರು ಹೇಳಲಿಚ್ಛಿಸದ ನಿವೃತ್ತ ಅಧಿಕಾರಿಯೊಬ್ಬರು ಹೇಳಿದರು.</p>.<p>ಅರಣ್ಯ ಇಲಾಖೆಗೆ ಬೆಳಗಾವಿ ವಿಭಾಗದ ಭೀಮಗಡ ವನ್ಯಜೀವಿ ವಲಯದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ 5.70 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 218 ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿತ್ತು. ಈ ಬಗ್ಗೆ ಮಾಹಿತಿ ಇದ್ದರೂ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಅಂದಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೇರಿ ಐವರ ವಿರುದ್ಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅರಣ್ಯ ಪಡೆ) ಸರ್ಕಾರಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>2018ರ ಪ್ರಕರಣದ ಇಲಾಖಾ ವಿಚಾರಣೆಯನ್ನು 2022ರ ತನಕ ಬಾಕಿ ಉಳಿಸಿಕೊಳ್ಳಲಾಗಿತ್ತು. ಆ ವೇಳೆಗೆ ಇಬ್ಬರು ನಿವೃತ್ತಿ ಹೊಂದಿದ್ದು, ಅವರಲ್ಲಿ ಒಬ್ಬರು ನಿಧನ ಹೊಂದಿದ್ದಾರೆ. ನಾಲ್ಕು ವರ್ಷಗಳ ಬಳಿಕ ಎಲ್ಲರನ್ನು ದೋಷಮುಕ್ತಗೊಳಿಸಿ ಸರ್ಕಾರ ಆದೇಶಿಸಿದೆ.</p>.<p>‘ಇಲಾಖಾ ವಿಚಾರಣೆಗೆ ಸರ್ಕಾರಕ್ಕೆ ಹೋದ ಪ್ರಸ್ತಾವನೆಗಳು ನಾಲ್ಕು ವರ್ಷವಾದರೂ ವಿಚಾರಣೆ ಪೂರ್ಣಗೊಳ್ಳುವುದಿಲ್ಲ. ಈ ರೀತಿ ವಿಳಂಬ ಮಾಡಿ ಲಂಚಕ್ಕಾಗಿ ಕಾಯಲಾಗುತ್ತದೆ. ಹಣ ಕೊಟ್ಟರೆ ಆರೋಪಿತರ ಪರವಾಗಿ ಆದೇಶಗಳನ್ನು ಹೊರಡಿಸಲಾಗುತ್ತದೆ. ಆರೋಪದಲ್ಲಿ ಹುರುಳಿಲ್ಲದ ಪ್ರಕರಣವಾಗಿದ್ದರೂ ಅನಗತ್ಯವಾಗಿ ಸತಾಯಿಸಲಾಗುತ್ತದೆ. ಆರೋಪ ಸತ್ಯ ಆಗಿದ್ದರೂ ಹಣ ಕೊಡಬೇಕು, ಸುಳ್ಳಾಗಿದ್ದರೂ ಹಣ ಕೊಡಬೇಕಾದ ಸ್ಥಿತಿ ಇದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>‘ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಗೆ ಹಾಜರಾಗಿಲ್ಲ ಎಂಬ ಆರೋಪದಲ್ಲಿ ಅಧಿಕಾರಿಯೊಬ್ಬರ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಲಾಗಿತ್ತು. ಹಾಜರಾಗಿದ್ದರು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾ<br />ರಿಯೇ ಪತ್ರ ಬರೆದಿದ್ದು, ಆರೋಪದಲ್ಲಿ ಹುರುಳಿಲ್ಲ ಎಂಬುದು ಸಾಬೀತಾಯಿತು. ಈ ಪ್ರಕರಣದಲ್ಲಿ ದೋಷಮುಕ್ತ ಗೊಳಿಸಲು ಲಕ್ಷಗಟ್ಟಲೆ ಲಂಚ ಕೊಡಬೇಕಾಯಿತು’ ಎಂದು ಅವರು ನೋವು ತೋಡಿಕೊಂಡರು.</p>.<p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸ<br />ಲಾಯಿತು. ಅವರು ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಗುರುತರ ಆರೋಪ ಗಳಲ್ಲಿ ವಿಚಾರಣೆ ಎದುರಿಸುತ್ತಿರುವ ಅಧಿಕಾರಿಗಳನ್ನು ರಕ್ಷಿಸಲು ‘ವಿಳಂಬ’ ಅಸ್ತ್ರವನ್ನು ಅರಣ್ಯ ಇಲಾಖೆ ಅನುಸರಿಸುತ್ತಿದೆ’ ಎಂಬ ಆರೋಪ ಕೇಳಿಬಂದಿದೆ.</p>.<p>ವಿಚಾರಣಾ ಪ್ರಕ್ರಿಯೆಯನ್ನು ಮೂರ್ನಾಲ್ಕು ವರ್ಷ ವಿಳಂಬ ಮಾಡಿ, ಅವುಗಳ ಗಂಭೀರತೆ ಕಡಿಮೆಯಾದ ಬಳಿಕ ಮುಚ್ಚಿ ಹಾಕುವ ಪ್ರಯತ್ನಗಳು ಸದ್ದಿಲ್ಲದೆ ನಡೆಯುತ್ತಿವೆ’ ಎಂದು ಇಲಾಖೆಯ ನಿವೃತ್ತಿ ಅಧಿಕಾರಿಗಳು ಆಪಾದಿಸಿದ್ದಾರೆ.</p>.<p>‘ಇಲಾಖಾ ವಿಚಾರಣೆ ಎಂಬುದು ಅರಣ್ಯ ಇಲಾಖೆಯಲ್ಲಿ ನಪಮಾತ್ರಕ್ಕೆ ಎಂಬಂತಾಗಿದೆ. ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಉಳಿದುಕೊಂಡಿವೆ. ಈ ರೀತಿ ವಿಳಂಬ ಮಾಡುವ ಮೂಲಕ ಗುರುತರ ಆರೋಪದ ಪ್ರಕರಣಗಳಲ್ಲಿ ಅಧಿಕಾರಿಗಳಿಗೆ ಅನುಕೂಲ ಮಾಡಿಕೊಟ್ಟರೆ, ಕ್ಷುಲ್ಲಕ ಆರೋಪಗಳನ್ನು ಹೊತ್ತ ಅಧಿಕಾರಿಗಳಿಗೆ ಅನಗತ್ಯ ಕಿರುಕುಳವನ್ನೂ ನೀಡಲಾಗುತ್ತಿದೆ’ ಎಂದು ಹೆಸರು ಹೇಳಲಿಚ್ಛಿಸದ ನಿವೃತ್ತ ಅಧಿಕಾರಿಯೊಬ್ಬರು ಹೇಳಿದರು.</p>.<p>ಅರಣ್ಯ ಇಲಾಖೆಗೆ ಬೆಳಗಾವಿ ವಿಭಾಗದ ಭೀಮಗಡ ವನ್ಯಜೀವಿ ವಲಯದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ 5.70 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 218 ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿತ್ತು. ಈ ಬಗ್ಗೆ ಮಾಹಿತಿ ಇದ್ದರೂ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಅಂದಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೇರಿ ಐವರ ವಿರುದ್ಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅರಣ್ಯ ಪಡೆ) ಸರ್ಕಾರಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>2018ರ ಪ್ರಕರಣದ ಇಲಾಖಾ ವಿಚಾರಣೆಯನ್ನು 2022ರ ತನಕ ಬಾಕಿ ಉಳಿಸಿಕೊಳ್ಳಲಾಗಿತ್ತು. ಆ ವೇಳೆಗೆ ಇಬ್ಬರು ನಿವೃತ್ತಿ ಹೊಂದಿದ್ದು, ಅವರಲ್ಲಿ ಒಬ್ಬರು ನಿಧನ ಹೊಂದಿದ್ದಾರೆ. ನಾಲ್ಕು ವರ್ಷಗಳ ಬಳಿಕ ಎಲ್ಲರನ್ನು ದೋಷಮುಕ್ತಗೊಳಿಸಿ ಸರ್ಕಾರ ಆದೇಶಿಸಿದೆ.</p>.<p>‘ಇಲಾಖಾ ವಿಚಾರಣೆಗೆ ಸರ್ಕಾರಕ್ಕೆ ಹೋದ ಪ್ರಸ್ತಾವನೆಗಳು ನಾಲ್ಕು ವರ್ಷವಾದರೂ ವಿಚಾರಣೆ ಪೂರ್ಣಗೊಳ್ಳುವುದಿಲ್ಲ. ಈ ರೀತಿ ವಿಳಂಬ ಮಾಡಿ ಲಂಚಕ್ಕಾಗಿ ಕಾಯಲಾಗುತ್ತದೆ. ಹಣ ಕೊಟ್ಟರೆ ಆರೋಪಿತರ ಪರವಾಗಿ ಆದೇಶಗಳನ್ನು ಹೊರಡಿಸಲಾಗುತ್ತದೆ. ಆರೋಪದಲ್ಲಿ ಹುರುಳಿಲ್ಲದ ಪ್ರಕರಣವಾಗಿದ್ದರೂ ಅನಗತ್ಯವಾಗಿ ಸತಾಯಿಸಲಾಗುತ್ತದೆ. ಆರೋಪ ಸತ್ಯ ಆಗಿದ್ದರೂ ಹಣ ಕೊಡಬೇಕು, ಸುಳ್ಳಾಗಿದ್ದರೂ ಹಣ ಕೊಡಬೇಕಾದ ಸ್ಥಿತಿ ಇದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>‘ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಗೆ ಹಾಜರಾಗಿಲ್ಲ ಎಂಬ ಆರೋಪದಲ್ಲಿ ಅಧಿಕಾರಿಯೊಬ್ಬರ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಲಾಗಿತ್ತು. ಹಾಜರಾಗಿದ್ದರು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾ<br />ರಿಯೇ ಪತ್ರ ಬರೆದಿದ್ದು, ಆರೋಪದಲ್ಲಿ ಹುರುಳಿಲ್ಲ ಎಂಬುದು ಸಾಬೀತಾಯಿತು. ಈ ಪ್ರಕರಣದಲ್ಲಿ ದೋಷಮುಕ್ತ ಗೊಳಿಸಲು ಲಕ್ಷಗಟ್ಟಲೆ ಲಂಚ ಕೊಡಬೇಕಾಯಿತು’ ಎಂದು ಅವರು ನೋವು ತೋಡಿಕೊಂಡರು.</p>.<p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸ<br />ಲಾಯಿತು. ಅವರು ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>