<p><strong>ಬೆಂಗಳೂರು</strong>: ‘ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಆಗಿರುವ ಅನ್ಯಾಯವನ್ನು ಖಂಡಿಸಿ ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ದೆಹಲಿ ಚಲೊ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಶೇಷಪ್ಪ ಅಂದೋಳ್ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಹುಲ್ಗಾಂಧಿ ಅವರು ದೇಶದಾದ್ಯಂತ ಯಾತ್ರೆ ಮಾಡುವ ವೇಳೆ ಅಲೆಮಾರಿಗಳ ಪರವಾಗಿ ಇರುವುದಾಗಿ ಹೇಳಿದ್ದರು. ಅವರದ್ದೇ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿದ್ದು, ಅಲೆಮಾರಿಗಳಿಗೆ ರಾಜ್ಯ ಸರ್ಕಾರ ಮಾಡಿರುವ ಅನ್ಯಾಯವನ್ನು ಸರಿಪಡಿಸಲು ಕೋರುತ್ತೇವೆ’ ಎಂದು ಹೇಳಿದರು.</p>.<p>ಹಿಂದಿನ ಎಲ್ಲ ಆಯೋಗಗಳು ಅಲೆಮಾರಿಗಳಿಗೆ ಶೇಕಡ 1ರಷ್ಟು ಮೀಸಲಿಟ್ಟಿದ್ದರು. ನ್ಯಾ. ನಾಗಮೋಹನದಾಸ್ ಆಯೋಗವೂ ಶೇ 1ರಷ್ಟು ಮೀಸಲಾತಿ ನೀಡಲು ಶಿಫಾರಸು ಮಾಡಿತ್ತು. ಆದರೆ, ಒಳಮೀಸಲಾತಿ ಅನುಷ್ಟಾನಕ್ಕೆ ತರುವಾಗ ರಾಜ್ಯ ಸರ್ಕಾರವು ಈ ಮೀಸಲಾತಿಯನ್ನು ಸ್ಪರ್ಶ ಜಾತಿಗಳ ಗುಂಪಿಗೆ ಸೇರಿಸಿ 49 ಅಲೆಮಾರಿ ಸಮುದಾಯಗಳಿಗೆ 10 ಸೂಕ್ಷ್ಮ ಸಮುದಾಯಗಳಿಗೆ ಅನ್ಯಾಯವೆಸಗಿದೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಅಲೆಮಾರಿ ಸಮುದಾಯದ ಹೋರಾಟಗಾರರಾದ ಬಿ.ಎಚ್. ಮಂಜುನಾಥ್, ವೆಂಕಟರಮಣ, ಬಸವರಾಜ ನಾರಾಯಣಕರ್, ಶಿವಕುಮಾರ್, ಸಾವಿತ್ರಿ ರತ್ನಾಕರ್, ಸಣ್ಣ ಮಾರಪ್ಪ, ವಸಂತ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಆಗಿರುವ ಅನ್ಯಾಯವನ್ನು ಖಂಡಿಸಿ ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ದೆಹಲಿ ಚಲೊ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಶೇಷಪ್ಪ ಅಂದೋಳ್ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಹುಲ್ಗಾಂಧಿ ಅವರು ದೇಶದಾದ್ಯಂತ ಯಾತ್ರೆ ಮಾಡುವ ವೇಳೆ ಅಲೆಮಾರಿಗಳ ಪರವಾಗಿ ಇರುವುದಾಗಿ ಹೇಳಿದ್ದರು. ಅವರದ್ದೇ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿದ್ದು, ಅಲೆಮಾರಿಗಳಿಗೆ ರಾಜ್ಯ ಸರ್ಕಾರ ಮಾಡಿರುವ ಅನ್ಯಾಯವನ್ನು ಸರಿಪಡಿಸಲು ಕೋರುತ್ತೇವೆ’ ಎಂದು ಹೇಳಿದರು.</p>.<p>ಹಿಂದಿನ ಎಲ್ಲ ಆಯೋಗಗಳು ಅಲೆಮಾರಿಗಳಿಗೆ ಶೇಕಡ 1ರಷ್ಟು ಮೀಸಲಿಟ್ಟಿದ್ದರು. ನ್ಯಾ. ನಾಗಮೋಹನದಾಸ್ ಆಯೋಗವೂ ಶೇ 1ರಷ್ಟು ಮೀಸಲಾತಿ ನೀಡಲು ಶಿಫಾರಸು ಮಾಡಿತ್ತು. ಆದರೆ, ಒಳಮೀಸಲಾತಿ ಅನುಷ್ಟಾನಕ್ಕೆ ತರುವಾಗ ರಾಜ್ಯ ಸರ್ಕಾರವು ಈ ಮೀಸಲಾತಿಯನ್ನು ಸ್ಪರ್ಶ ಜಾತಿಗಳ ಗುಂಪಿಗೆ ಸೇರಿಸಿ 49 ಅಲೆಮಾರಿ ಸಮುದಾಯಗಳಿಗೆ 10 ಸೂಕ್ಷ್ಮ ಸಮುದಾಯಗಳಿಗೆ ಅನ್ಯಾಯವೆಸಗಿದೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಅಲೆಮಾರಿ ಸಮುದಾಯದ ಹೋರಾಟಗಾರರಾದ ಬಿ.ಎಚ್. ಮಂಜುನಾಥ್, ವೆಂಕಟರಮಣ, ಬಸವರಾಜ ನಾರಾಯಣಕರ್, ಶಿವಕುಮಾರ್, ಸಾವಿತ್ರಿ ರತ್ನಾಕರ್, ಸಣ್ಣ ಮಾರಪ್ಪ, ವಸಂತ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>