<p><strong>ಬೆಂಗಳೂರು</strong>: ರಸಗೊಬ್ಬರಕ್ಕೆ ನೀಡುವ ಸಹಾಯ ಧನವನ್ನು ನೇರವಾಗಿ ರೈತರಿಗೆ ನೀಡಬೇಕು ಎಂದು ಭಾರತೀಯ ಕಿಸಾನ್ ಸಂಘ ಆಗ್ರಹಿಸಿದೆ.</p>.<p>ಕೇಂದ್ರ ಸರ್ಕಾರ ರಸಗೊಬ್ಬರ ಸಹಾಯಧನವನ್ನು ಹೆಚ್ಚಿಸಲು ಮುಂದಾಗಿದೆ. ಇದರಿಂದಾಗಿ ದೇಶಕ್ಕೆ ಮತ್ತಷ್ಟು ಹೊರೆಯಾಗಲಿದೆ ಹಾಗೂ ರಸಾಯನಿಕ ಕಂಪನಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಪ್ರಧಾನ ಕಾರ್ಯದರ್ಶಿ ಹಾಡ್ಯ ರಮೇಶ್ರಾಜು ದೂರಿದ್ದಾರೆ.</p>.<p>ಒಂದು ಎಕರೆ ಕಬ್ಬು ಬೆಳೆಗೆ ಕನಿಷ್ಠ 20 ಚೀಲ ರಸಗೊಬ್ಬರ ಬಳಸಲಾಗುತ್ತಿದೆ. ಅಂದರೆ, 20 ಚೀಲಕ್ಕೆ ಸರಾಸರಿ ₹40 ಸಾವಿರದಿಂದ ₹50 ಸಾವಿರ ರೈತರ ಹೆಸರಿನಲ್ಲಿ ಕಂಪನಿಗಳ ಪಾಲಾಗುತ್ತಿದೆ. ಇದರ ಬದಲು ರಸಗೊಬ್ಬರವನ್ನು ಮುಕ್ತ ಮಾರುಕಟ್ಟೆಯಲ್ಲಿ ವಿತರಿಸಿ ಸಹಾಯಧನವನ್ನು ರೈತರಿಗೆ ನೇರವಾಗಿ ಕೃಷಿ ಉತ್ಪನ್ನಗಳ ಮಾನದಂಡದ ಆಧಾರದ ಮೇಲೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಈ ರೀತಿಯ ಕ್ರಮಗಳಿಂದ ದುಬಾರಿ ರಸಗೊಬ್ಬರ ಬದಲಾಗಿ ನೈಸರ್ಗಿಕ ಕೃಷಿಯತ್ತ ರೈತರು ಒಲವು ತೋರುತ್ತಾರೆ. ಆಗ ಸಮಾಜಕ್ಕೂ ವಿಷಮುಕ್ತ ಆಹಾರ ದೊರೆಯುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಸಗೊಬ್ಬರಕ್ಕೆ ನೀಡುವ ಸಹಾಯ ಧನವನ್ನು ನೇರವಾಗಿ ರೈತರಿಗೆ ನೀಡಬೇಕು ಎಂದು ಭಾರತೀಯ ಕಿಸಾನ್ ಸಂಘ ಆಗ್ರಹಿಸಿದೆ.</p>.<p>ಕೇಂದ್ರ ಸರ್ಕಾರ ರಸಗೊಬ್ಬರ ಸಹಾಯಧನವನ್ನು ಹೆಚ್ಚಿಸಲು ಮುಂದಾಗಿದೆ. ಇದರಿಂದಾಗಿ ದೇಶಕ್ಕೆ ಮತ್ತಷ್ಟು ಹೊರೆಯಾಗಲಿದೆ ಹಾಗೂ ರಸಾಯನಿಕ ಕಂಪನಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಪ್ರಧಾನ ಕಾರ್ಯದರ್ಶಿ ಹಾಡ್ಯ ರಮೇಶ್ರಾಜು ದೂರಿದ್ದಾರೆ.</p>.<p>ಒಂದು ಎಕರೆ ಕಬ್ಬು ಬೆಳೆಗೆ ಕನಿಷ್ಠ 20 ಚೀಲ ರಸಗೊಬ್ಬರ ಬಳಸಲಾಗುತ್ತಿದೆ. ಅಂದರೆ, 20 ಚೀಲಕ್ಕೆ ಸರಾಸರಿ ₹40 ಸಾವಿರದಿಂದ ₹50 ಸಾವಿರ ರೈತರ ಹೆಸರಿನಲ್ಲಿ ಕಂಪನಿಗಳ ಪಾಲಾಗುತ್ತಿದೆ. ಇದರ ಬದಲು ರಸಗೊಬ್ಬರವನ್ನು ಮುಕ್ತ ಮಾರುಕಟ್ಟೆಯಲ್ಲಿ ವಿತರಿಸಿ ಸಹಾಯಧನವನ್ನು ರೈತರಿಗೆ ನೇರವಾಗಿ ಕೃಷಿ ಉತ್ಪನ್ನಗಳ ಮಾನದಂಡದ ಆಧಾರದ ಮೇಲೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಈ ರೀತಿಯ ಕ್ರಮಗಳಿಂದ ದುಬಾರಿ ರಸಗೊಬ್ಬರ ಬದಲಾಗಿ ನೈಸರ್ಗಿಕ ಕೃಷಿಯತ್ತ ರೈತರು ಒಲವು ತೋರುತ್ತಾರೆ. ಆಗ ಸಮಾಜಕ್ಕೂ ವಿಷಮುಕ್ತ ಆಹಾರ ದೊರೆಯುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>