ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುವ ವ್ಯಕ್ತಿಗಳ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಆರೋಪಿ ಸತೀಶ್ (23) ಅವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಆರೋಪಿ ಸತೀಶ್, ಆಹಾರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಅದರ ಜೊತೆಯಲ್ಲೇ ಮೊಬೈಲ್ ಕಳ್ಳತನ ಮಾಡಿ ಮಾರುತ್ತಿದ್ದ. ಈತನಿಂದ ₹ 8.50 ಲಕ್ಷ ಮೌಲ್ಯದ 15 ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಫೆಬ್ರುವರಿ 24ರಂದು ವ್ಯಕ್ತಿಯೊಬ್ಬರ ಮೊಬೈಲ್ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ದೂರಿನ ತನಿಖೆ ಕೈಗೊಂಡು ಆರೋಪಿಯನ್ನು ಸೆರೆ ಹಿಡಿಯಲಾಗಿದೆ ಎಂದರು.