ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಬಿಎಂಟಿಸಿ ಬಸ್‌ ಗುದ್ದಿ ಡೆಲಿವರಿ ಬಾಯ್ ಸಾವು

Last Updated 19 ಫೆಬ್ರುವರಿ 2023, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಜಲಭವನ ಬಳಿ ಭಾನುವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಡೆಲಿವರಿ ಬಾಯ್ ಸೈನುಲ್ಲಾ ಅಹಮ್ಮದ್ ಬಾಬ್ರೂಯ್ (20) ಎಂಬುವರು ಮೃತಪಟ್ಟಿದ್ದಾರೆ.

‘ಅಸ್ಸಾಂನ ಸೈನುಲ್ಲಾ, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಜೆ.ಪಿ. ನಗರದಲ್ಲಿ ವಾಸವಿದ್ದರು. ಮೊಬೈಲ್ ಆ್ಯಪ್ ಆಧರಿತ ಸ್ವಿಗ್ಗಿ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದರು’ ಎಂದು ಮೈಕೊ ಲೇಔಟ್ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ಗ್ರಾಹಕರೊಬ್ಬರ ಮನೆಗೆ ಆಹಾರ ತಲುಪಿಸುವುದಕ್ಕಾಗಿ ಸೈನುಲ್ಲಾ ಅವರು ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಿಎಂಟಿಸಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಗುದ್ದಿತ್ತು. ರಸ್ತೆಗೆ ಬಿದ್ದಿದ್ದ ಸೈನುಲ್ಲಾ ತಲೆ ಮೇಲೆಯೇ ಬಸ್ಸಿನ ಚಕ್ರ ಹರಿದಿದೆ. ತೀವ್ರ ಗಾಯಗೊಂಡ ಸೈನುಲ್ಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.

‘ಆರಂಭದಲ್ಲಿ ಯಾವ ವಾಹನದಿಂದ ಅಪಘಾತ ಸಂಭವಿಸಿದೆ ಎಂಬುದು ಗೊತ್ತಾಗಿರಲಿಲ್ಲ. ಅಪಘಾತ ಸ್ಥಳದ ಸಮೀಪದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗಿದೆ. ಬಿಎಂಟಿಸಿ ಬಸ್‌ನಿಂದ ಅಪಘಾತ ಸಂಭವಿಸಿರುವುದು ಗೊತ್ತಾಗಿದೆ. ಅಪಘಾತದ ಬಳಿಕ ಬಸ್‌ ಸಮೇತ ಚಾಲಕ ಪರಾರಿಯಾಗಿದ್ದಾನೆ. ನಿರ್ಲಕ್ಷ್ಯ ಹಾಗೂ ಅತೀ ವೇಗದ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT