<p><strong>ಬೆಂಗಳೂರು: </strong>ನಗರದ ಕಸ ವಿಲೇವಾರಿ ವ್ಯವಸ್ಥೆಯನ್ನು ಹದ್ದುಬಸ್ತಿಗೆ ತರಲು ಮುತುವರ್ಜಿ ವಹಿಸಿದ್ದ ಐಎಎಸ್ ಅಧಿಕಾರಿ ರಂದೀಪ್ ಅವರನ್ನು ಪಾಲಿಕೆಯಲ್ಲೇ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಆನ್ಲೈನ್ನಲ್ಲಿ ಅಭಿಯಾನ ಆರಂಭವಾಗಿದೆ.</p>.<p>ಬಿಬಿಎಂಪಿಯ ಹೆಚ್ಚುವರಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಆರು ತಿಂಗಳೊಳಗೆ ಅವರನ್ನು ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ವರ್ಗ ಮಾಡಿದೆ. ಅವರನ್ನು ಪಾಲಿಕೆಯಲ್ಲೇ ಉಳಿಸಿಕೊಳ್ಳುವ ಸಲುವಾಗಿ ಮೀನಾಕ್ಷಿ ಪ್ರಭು ಎಂಬುವರು ಆರಂಭಿಸಿರುವ ಈ ಅಭಿಯಾನಕ್ಕೆ ಮಂಗಳವಾರದವರೆಗೆ 1,412 ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ಬಿಬಿಎಂಪಿಯು ಅನೇಕ ವರ್ಷಗಳಿಂದ ಕಸ ವಿಲೇವಾರಿ ಗುತ್ತಿಗೆಯನ್ನು ಟೆಂಡರ್ ಕರೆಯದೆಯೇ ನೀಡುತ್ತಾ ಬಂದಿದೆ. ಕಸ ವಿಲೇವಾರಿಗೆ ಡಿಸೆಂಬರ್ ಅಂತ್ಯದೊಳಗೆ ಟೆಂಡರ್ ಕರೆಯುವುದಕ್ಕೆ ಬಿಬಿಎಂಪಿ ಸಿದ್ಧತೆ ನಡೆಸಿದೆ. ರಂದೀಪ್ ಅವರೇ ಇದರ ಉಸ್ತುವಾರಿ ನೋಡಿಕೊಂಡಿದ್ದರು.</p>.<p>ಕಸದ ರಾಶಿಯನ್ನು ಸ್ವಚ್ಛಗೊಳಿಸಿ, ಆ ಪ್ರದೇಶದಲ್ಲಿ ರಂಗೋಲಿ ಬಿಡಿಸುವ ವಿನೂತನ ಕಾರ್ಯಕ್ರಮವನ್ನು ಜಾರಿಗೊಳಿಸುವಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಲು ಮಾರ್ಷಲ್ಗಳನ್ನು ನೇಮಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.</p>.<p>‘ರಂದೀಪ್ ಅವರು ಕಸ ವಿಲೇವಾರಿ ವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳಲು ಆರಂಭಿಸಿದ ಕೇವಲ ಎರಡು ತಿಂಗಳಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದರು. ಇದರಿಂದ ಸ್ವಚ್ಛ ನಗರವನ್ನು ರೂಪಿಸಲು ಬಯಸುವ ಜನತೆಯಲ್ಲಿ ಇದು ಹೊಸ ಭರವಸೆ ಮೂಡಿತ್ತು. ಪರಿಣಾಮಕಾರಿ ಬದಲಾವಣೆಗಳಾಗುತ್ತಿರುವ ಸಂದರ್ಭದಲ್ಲೇ ಈ ಅಧಿಕಾರಿಯನ್ನು ವರ್ಗಾವಣೆ ಮಾಡುವುದು ಸರಿಯಲ್ಲ. ಅವರ ವರ್ಗಾವಣೆಯನ್ನು ರದ್ದುಪಡಿಸಬೇಕು’ ಎಂದು ಮೀನಾಕ್ಷಿ ಪ್ರಭು ಒತ್ತಾಯಿಸಿದ್ದಾರೆ.</p>.<p>ರಂದೀಪ್ ವರ್ಗಾವಣೆ ರದ್ದುಪಡಿಸಬೇಕು ಎಂದು ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಒತ್ತಾಯಿಸಿದೆ. ಈ ಬಗ್ಗೆ ಬೆಂಗಳೂರು ಅಭಿವೃದ್ಧಿ ಸಚಿವ ಜಿ.ಪರಮೇಶ್ವರ ಹಾಗೂ ಸರ್ಕಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಸಂಘವು ಮನವಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಕಸ ವಿಲೇವಾರಿ ವ್ಯವಸ್ಥೆಯನ್ನು ಹದ್ದುಬಸ್ತಿಗೆ ತರಲು ಮುತುವರ್ಜಿ ವಹಿಸಿದ್ದ ಐಎಎಸ್ ಅಧಿಕಾರಿ ರಂದೀಪ್ ಅವರನ್ನು ಪಾಲಿಕೆಯಲ್ಲೇ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಆನ್ಲೈನ್ನಲ್ಲಿ ಅಭಿಯಾನ ಆರಂಭವಾಗಿದೆ.</p>.<p>ಬಿಬಿಎಂಪಿಯ ಹೆಚ್ಚುವರಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಆರು ತಿಂಗಳೊಳಗೆ ಅವರನ್ನು ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ವರ್ಗ ಮಾಡಿದೆ. ಅವರನ್ನು ಪಾಲಿಕೆಯಲ್ಲೇ ಉಳಿಸಿಕೊಳ್ಳುವ ಸಲುವಾಗಿ ಮೀನಾಕ್ಷಿ ಪ್ರಭು ಎಂಬುವರು ಆರಂಭಿಸಿರುವ ಈ ಅಭಿಯಾನಕ್ಕೆ ಮಂಗಳವಾರದವರೆಗೆ 1,412 ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ಬಿಬಿಎಂಪಿಯು ಅನೇಕ ವರ್ಷಗಳಿಂದ ಕಸ ವಿಲೇವಾರಿ ಗುತ್ತಿಗೆಯನ್ನು ಟೆಂಡರ್ ಕರೆಯದೆಯೇ ನೀಡುತ್ತಾ ಬಂದಿದೆ. ಕಸ ವಿಲೇವಾರಿಗೆ ಡಿಸೆಂಬರ್ ಅಂತ್ಯದೊಳಗೆ ಟೆಂಡರ್ ಕರೆಯುವುದಕ್ಕೆ ಬಿಬಿಎಂಪಿ ಸಿದ್ಧತೆ ನಡೆಸಿದೆ. ರಂದೀಪ್ ಅವರೇ ಇದರ ಉಸ್ತುವಾರಿ ನೋಡಿಕೊಂಡಿದ್ದರು.</p>.<p>ಕಸದ ರಾಶಿಯನ್ನು ಸ್ವಚ್ಛಗೊಳಿಸಿ, ಆ ಪ್ರದೇಶದಲ್ಲಿ ರಂಗೋಲಿ ಬಿಡಿಸುವ ವಿನೂತನ ಕಾರ್ಯಕ್ರಮವನ್ನು ಜಾರಿಗೊಳಿಸುವಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಲು ಮಾರ್ಷಲ್ಗಳನ್ನು ನೇಮಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.</p>.<p>‘ರಂದೀಪ್ ಅವರು ಕಸ ವಿಲೇವಾರಿ ವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳಲು ಆರಂಭಿಸಿದ ಕೇವಲ ಎರಡು ತಿಂಗಳಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದರು. ಇದರಿಂದ ಸ್ವಚ್ಛ ನಗರವನ್ನು ರೂಪಿಸಲು ಬಯಸುವ ಜನತೆಯಲ್ಲಿ ಇದು ಹೊಸ ಭರವಸೆ ಮೂಡಿತ್ತು. ಪರಿಣಾಮಕಾರಿ ಬದಲಾವಣೆಗಳಾಗುತ್ತಿರುವ ಸಂದರ್ಭದಲ್ಲೇ ಈ ಅಧಿಕಾರಿಯನ್ನು ವರ್ಗಾವಣೆ ಮಾಡುವುದು ಸರಿಯಲ್ಲ. ಅವರ ವರ್ಗಾವಣೆಯನ್ನು ರದ್ದುಪಡಿಸಬೇಕು’ ಎಂದು ಮೀನಾಕ್ಷಿ ಪ್ರಭು ಒತ್ತಾಯಿಸಿದ್ದಾರೆ.</p>.<p>ರಂದೀಪ್ ವರ್ಗಾವಣೆ ರದ್ದುಪಡಿಸಬೇಕು ಎಂದು ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಒತ್ತಾಯಿಸಿದೆ. ಈ ಬಗ್ಗೆ ಬೆಂಗಳೂರು ಅಭಿವೃದ್ಧಿ ಸಚಿವ ಜಿ.ಪರಮೇಶ್ವರ ಹಾಗೂ ಸರ್ಕಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಸಂಘವು ಮನವಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>