ರಾಜ್ಯದ 140ಕ್ಕೂ ಹೆಚ್ಚು ಧರ್ಮರಾಯಸ್ವಾಮಿ ಮತ್ತು ದ್ರೌಪದಮ್ಮ ದೇವಸ್ಥಾನಗಳಲ್ಲಿ ಪ್ರತಿ ವರ್ಷವೂ ಕರಗ ಆಚರಿಸಲಾಗುತ್ತಿತ್ತು. ಅದೇ ರೀತಿ ಇತರ ದೇವಸ್ಥಾನಗಳಲ್ಲಿ ಜಾತ್ರೆ, ಉತ್ಸವ ನಡೆಸಲಾಗುತ್ತಿತ್ತು. ಕೋವಿಡ್ ಕಾರಣದಿಂದ ಎರಡು ವರ್ಷದಿಂದ ಜಾತ್ರೆ, ಕರಗ, ಉತ್ಸವ ನಡೆದಿಲ್ಲ.ಈಗ ಇತರ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಅವಕಾಶ ನೀಡಲಾಗಿದೆ. ಅದೇ ರೀತಿ ಕರಗ, ಜಾತ್ರೆಗಳ ಮೇಲಿನ ನಿರ್ಬಂಧವನ್ನೂ ರದ್ದು ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.