<p><strong>ಬೆಂಗಳೂರು:</strong> ರಾಜ್ಯ ಬಜೆಟ್ನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗಾಗಿ ₹ 200 ಕೋಟಿ ಮೀಸಲಿಡಬೇಕು ಎಂದು ‘ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ’ಯ ಪದಾಧಿಕಾರಿಗಳು ಆಗ್ರಹಿಸಿದರು.</p>.<p>ಚಳವಳಿ ರಾಜ್ಯ ಸಮಿತಿ ಸದಸ್ಯರಾದ ಕೃತಿಕಾ, ನಿಶಾ ಗುಳೂರ್, ಆಕಾಶ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಾಂಗ್ರೆಸ್ ಕಳೆದ ಚುನಾವಣೆಯ ಸಂದರ್ಭದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ₹ 200 ಕೋಟಿ ಮೀಸಲಿಡುವುದಾಗಿ ಘೋಷಣೆ ಮಾಡಿತ್ತು. ಆದರೆ, ವಾಗ್ದಾನ ಇನ್ನೂ ನೆರವೇರಿಸಿಲ್ಲ. ಈ ಬಾರಿ ಬಜೆಟ್ನಲ್ಲಿ ಘೋಷಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕು. ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ ₹ 250 ಕೋಟಿ ಒದಗಿಸಬೇಕು. ವಸತಿ, ವಸತಿನಿಲಯ, ತಾತ್ಕಾಲಿಕ ಸ್ಟೇಹೋಮ್ಗಳನ್ನು ಒದಗಿಸಬೇಕು. ಪ್ರತಿ ವರ್ಷ ಕನಿಷ್ಠ 500 ಮನೆ ಹಂಚಿಕೆ ಮಾಡಬೇಕು’ ಎಂದು ಹೇಳಿದರು.</p>.<p>‘ಕೃಷಿ ಆಸಕ್ತ ಪ್ರತಿಯೊಬ್ಬರಿಗೆ ಎರಡು ಎಕರೆ ಭೂಮಿ ಒದಗಿಸಬೇಕು. ಗೋಮಾಳ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಬೇಕು. ಉದ್ಯಮಶೀಲವನ್ನು ಪ್ರೋತ್ಸಾಹಿಸಲು ಬ್ಯಾಂಕ್ ಲಿಂಕ್ ಆಧಾರಿತ ಯೋಜನೆ ಜಾರಿಗೊಳಿಸಿ ಪ್ರತಿ ವ್ಯಕ್ತಿಗೆ ₹ 2 ಲಕ್ಷ ಸಬ್ಸಿಡಿ ನೀಡಬೇಕು. ಸ್ವಸಹಾಯ ಗುಂಪುಗಳನ್ನು ರಚಿಸಲು ಅನುದಾನ ನೀಡಬೇಕು. ಬಡ್ಡಿರಹಿತ ಸಾಲ ಒದಗಿಸಬೇಕು. ಮೈತ್ರಿ ಪಿಂಚಣಿಯನ್ನು ₹ 2 ಸಾವಿರಕ್ಕೆ ಹೆಚ್ಚಿಸಬೇಕು. ವೃದ್ಧಾಪ್ಯ ಪಿಂಚಣಿ ₹ 5 ಸಾವಿರ ನೀಡಬೇಕು. ಸರ್ಕಾರಿ ಉದ್ಯೋಗ, ಸ್ಫರ್ಧಾತ್ಮಕ ಪರಿಕ್ಷಾ ತರಬೇತಿ, ಕೋಚಿಂಗ್ಗಳಲ್ಲಿ ಶೇ 1 ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಬಜೆಟ್ನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗಾಗಿ ₹ 200 ಕೋಟಿ ಮೀಸಲಿಡಬೇಕು ಎಂದು ‘ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ’ಯ ಪದಾಧಿಕಾರಿಗಳು ಆಗ್ರಹಿಸಿದರು.</p>.<p>ಚಳವಳಿ ರಾಜ್ಯ ಸಮಿತಿ ಸದಸ್ಯರಾದ ಕೃತಿಕಾ, ನಿಶಾ ಗುಳೂರ್, ಆಕಾಶ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಾಂಗ್ರೆಸ್ ಕಳೆದ ಚುನಾವಣೆಯ ಸಂದರ್ಭದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ₹ 200 ಕೋಟಿ ಮೀಸಲಿಡುವುದಾಗಿ ಘೋಷಣೆ ಮಾಡಿತ್ತು. ಆದರೆ, ವಾಗ್ದಾನ ಇನ್ನೂ ನೆರವೇರಿಸಿಲ್ಲ. ಈ ಬಾರಿ ಬಜೆಟ್ನಲ್ಲಿ ಘೋಷಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕು. ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ ₹ 250 ಕೋಟಿ ಒದಗಿಸಬೇಕು. ವಸತಿ, ವಸತಿನಿಲಯ, ತಾತ್ಕಾಲಿಕ ಸ್ಟೇಹೋಮ್ಗಳನ್ನು ಒದಗಿಸಬೇಕು. ಪ್ರತಿ ವರ್ಷ ಕನಿಷ್ಠ 500 ಮನೆ ಹಂಚಿಕೆ ಮಾಡಬೇಕು’ ಎಂದು ಹೇಳಿದರು.</p>.<p>‘ಕೃಷಿ ಆಸಕ್ತ ಪ್ರತಿಯೊಬ್ಬರಿಗೆ ಎರಡು ಎಕರೆ ಭೂಮಿ ಒದಗಿಸಬೇಕು. ಗೋಮಾಳ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಬೇಕು. ಉದ್ಯಮಶೀಲವನ್ನು ಪ್ರೋತ್ಸಾಹಿಸಲು ಬ್ಯಾಂಕ್ ಲಿಂಕ್ ಆಧಾರಿತ ಯೋಜನೆ ಜಾರಿಗೊಳಿಸಿ ಪ್ರತಿ ವ್ಯಕ್ತಿಗೆ ₹ 2 ಲಕ್ಷ ಸಬ್ಸಿಡಿ ನೀಡಬೇಕು. ಸ್ವಸಹಾಯ ಗುಂಪುಗಳನ್ನು ರಚಿಸಲು ಅನುದಾನ ನೀಡಬೇಕು. ಬಡ್ಡಿರಹಿತ ಸಾಲ ಒದಗಿಸಬೇಕು. ಮೈತ್ರಿ ಪಿಂಚಣಿಯನ್ನು ₹ 2 ಸಾವಿರಕ್ಕೆ ಹೆಚ್ಚಿಸಬೇಕು. ವೃದ್ಧಾಪ್ಯ ಪಿಂಚಣಿ ₹ 5 ಸಾವಿರ ನೀಡಬೇಕು. ಸರ್ಕಾರಿ ಉದ್ಯೋಗ, ಸ್ಫರ್ಧಾತ್ಮಕ ಪರಿಕ್ಷಾ ತರಬೇತಿ, ಕೋಚಿಂಗ್ಗಳಲ್ಲಿ ಶೇ 1 ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>