‘ಮುಖ್ಯ ತೀರ್ಮಾನಗಳನ್ನು ಕೈಗೊಳ್ಳುವಾಗ ಚರ್ಚೆ, ಅಭಿಪ್ರಾಯ ಭೇದಗಳಿಗೆ ಮನ್ನಣೆ ಕೊಡುವುದು ನಿಜವಾದ ಪ್ರಜಾಪ್ರಭುತ್ವ.ಎಲ್ಲ ಧರ್ಮದವರು ಒಟ್ಟಾಗಿ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕಿದೆ. ಆದರೆ, ದೇಶದಲ್ಲಿ ದಿನದಿಂದ ದಿನಕ್ಕೆ ಕೋಮುಗಲಭೆ, ದೌರ್ಜನ್ಯ, ಸಂವಿಧಾನ ವಿರೋಧಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಚುನಾವಣೆಗಳು ಬಂದರೆ ರಾಜಕೀಯ ಪಕ್ಷಗಳು ಒಡೆದು ಆಳುವ ನೀತಿಗಳನ್ನು ಪ್ರಯೋಗಿಸುತ್ತವೆ. ಧರ್ಮ, ಜಾತಿಯ ಹೆಸರಿನಲ್ಲಿ ಕೋಮು ಗಲಭೆ ಸೃಷ್ಟಿಸಲಾಗುತ್ತಿದೆ’ ಎಂದರು.