<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) 200ರಿಂದ 2015ರವರೆಗೆ ಕಾನೂನುಬಾಹಿರವಾಗಿ 1,316 ಪರವಾನಗಿಗಳನ್ನು ನೀಡಿದ್ದು, ಈ ಹಗರಣದ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಪಿ.ಆರ್. ರಮೇಶ್ ಆಗ್ರಹಿಸಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶರತ್ಚಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ, 1,316 ಪ್ರಕರಣಗಳಲ್ಲಿ ನಿರ್ಮಾಣ ಮತ್ತು ಕಾರ್ಯಾ ಚರಣೆಗೆ ಅನುಮತಿ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ನಾನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೆ. ಈ ಎಲ್ಲ ಪ್ರಕರಣಗಳಲ್ಲಿ ನೀಡಿದ್ದ ಅನುಮತಿ ಯನ್ನು ಹಿಂಪಡೆಯುವುದಾಗಿ ಮಂಡಳಿಯು ಹೈಕೋರ್ಟ್ಗೆ ತಿಳಿಸಿತ್ತು. ಈವರೆಗೂ ಆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ’ ಎಂದರು.</p>.<p>ಜಲ ಕಾಯ್ದೆ–1974ರ ಸೆಕ್ಷನ್ 44ಕ್ಕೆ ವಿರುದ್ಧ ವಾಗಿ ಮಂಡಳಿಯಲ್ಲಿ ನಿರ್ಣಯ ಕೈಗೊಂಡು, ಅದರ ಆಧಾರದಲ್ಲಿ ಅನುಮತಿಗಳನ್ನು ನೀಡಲಾ ಗಿತ್ತು. ಈ ರೀತಿ ಅಕ್ರಮ ಎಸಗಿರುವುದರ ಹಿಂದೆ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿತ್ತು. ಆ ಬಗ್ಗೆ ಯಾವುದೇ ತನಿಖೆ ನಡೆದಿಲ್ಲ. ಅಕ್ರಮವಾಗಿ ನೀಡಿರುವ ಅನುಮತಿಗಳನ್ನು ರದ್ದುಪಡಿಸುವ ಕೆಲಸವೂ ಆಗಿಲ್ಲ. ಆಗ ಮಂಡಳಿಯ ಅಧ್ಯಕ್ಷ ಮತ್ತು ಸದಸ್ಯರಾಗಿದ್ದವರ ಜತೆಗೆ ಸಮ್ಮಿಶ್ರ ಸರ್ಕಾರದಲ್ಲಿದ್ದವರೂ ಈ ಅಕ್ರಮದಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿದರು. ಕಾಯ್ದೆಗೆ ವಿರುದ್ಧವಾಗಿ 2007ರ ನವೆಂಬರ್ 13ರಂದು ಮಾಡಿದ್ದ ಠರಾವನ್ನು ಮಂಡಳಿ ಸ್ವಇಚ್ಛೆಯಿಂದ ಹಿಂಪಡೆದಿತ್ತು. ಈ ಸಂಬಂಧ ಹೈಕೋರ್ಟ್ 2022ರ ಜುಲೈ 7ರಂದು ತೀರ್ಪನ್ನೂ ನೀಡಿದೆ. ಆದರೆ, ಈಗ ಮರುಪರಿಶೀಲನಾ ಅರ್ಜಿ ಸಲ್ಲಿಸಿ ಕಾಲಹರಣ ಮಾಡುವ ಕೆಲಸವನ್ನು ಮಂಡಳಿ ಮಾಡುತ್ತಿದೆ. ಹೈಕೋರ್ಟ್ ತೀರ್ಪು ಪಾಲಿಸದ ಮಂಡಳಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ರಮೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) 200ರಿಂದ 2015ರವರೆಗೆ ಕಾನೂನುಬಾಹಿರವಾಗಿ 1,316 ಪರವಾನಗಿಗಳನ್ನು ನೀಡಿದ್ದು, ಈ ಹಗರಣದ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಪಿ.ಆರ್. ರಮೇಶ್ ಆಗ್ರಹಿಸಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶರತ್ಚಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ, 1,316 ಪ್ರಕರಣಗಳಲ್ಲಿ ನಿರ್ಮಾಣ ಮತ್ತು ಕಾರ್ಯಾ ಚರಣೆಗೆ ಅನುಮತಿ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ನಾನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೆ. ಈ ಎಲ್ಲ ಪ್ರಕರಣಗಳಲ್ಲಿ ನೀಡಿದ್ದ ಅನುಮತಿ ಯನ್ನು ಹಿಂಪಡೆಯುವುದಾಗಿ ಮಂಡಳಿಯು ಹೈಕೋರ್ಟ್ಗೆ ತಿಳಿಸಿತ್ತು. ಈವರೆಗೂ ಆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ’ ಎಂದರು.</p>.<p>ಜಲ ಕಾಯ್ದೆ–1974ರ ಸೆಕ್ಷನ್ 44ಕ್ಕೆ ವಿರುದ್ಧ ವಾಗಿ ಮಂಡಳಿಯಲ್ಲಿ ನಿರ್ಣಯ ಕೈಗೊಂಡು, ಅದರ ಆಧಾರದಲ್ಲಿ ಅನುಮತಿಗಳನ್ನು ನೀಡಲಾ ಗಿತ್ತು. ಈ ರೀತಿ ಅಕ್ರಮ ಎಸಗಿರುವುದರ ಹಿಂದೆ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿತ್ತು. ಆ ಬಗ್ಗೆ ಯಾವುದೇ ತನಿಖೆ ನಡೆದಿಲ್ಲ. ಅಕ್ರಮವಾಗಿ ನೀಡಿರುವ ಅನುಮತಿಗಳನ್ನು ರದ್ದುಪಡಿಸುವ ಕೆಲಸವೂ ಆಗಿಲ್ಲ. ಆಗ ಮಂಡಳಿಯ ಅಧ್ಯಕ್ಷ ಮತ್ತು ಸದಸ್ಯರಾಗಿದ್ದವರ ಜತೆಗೆ ಸಮ್ಮಿಶ್ರ ಸರ್ಕಾರದಲ್ಲಿದ್ದವರೂ ಈ ಅಕ್ರಮದಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿದರು. ಕಾಯ್ದೆಗೆ ವಿರುದ್ಧವಾಗಿ 2007ರ ನವೆಂಬರ್ 13ರಂದು ಮಾಡಿದ್ದ ಠರಾವನ್ನು ಮಂಡಳಿ ಸ್ವಇಚ್ಛೆಯಿಂದ ಹಿಂಪಡೆದಿತ್ತು. ಈ ಸಂಬಂಧ ಹೈಕೋರ್ಟ್ 2022ರ ಜುಲೈ 7ರಂದು ತೀರ್ಪನ್ನೂ ನೀಡಿದೆ. ಆದರೆ, ಈಗ ಮರುಪರಿಶೀಲನಾ ಅರ್ಜಿ ಸಲ್ಲಿಸಿ ಕಾಲಹರಣ ಮಾಡುವ ಕೆಲಸವನ್ನು ಮಂಡಳಿ ಮಾಡುತ್ತಿದೆ. ಹೈಕೋರ್ಟ್ ತೀರ್ಪು ಪಾಲಿಸದ ಮಂಡಳಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ರಮೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>