ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶರತ್ಚಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ, 1,316 ಪ್ರಕರಣಗಳಲ್ಲಿ ನಿರ್ಮಾಣ ಮತ್ತು ಕಾರ್ಯಾ ಚರಣೆಗೆ ಅನುಮತಿ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ನಾನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೆ. ಈ ಎಲ್ಲ ಪ್ರಕರಣಗಳಲ್ಲಿ ನೀಡಿದ್ದ ಅನುಮತಿ ಯನ್ನು ಹಿಂಪಡೆಯುವುದಾಗಿ ಮಂಡಳಿಯು ಹೈಕೋರ್ಟ್ಗೆ ತಿಳಿಸಿತ್ತು. ಈವರೆಗೂ ಆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ’ ಎಂದರು.