ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಾಡಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ

Last Updated 15 ಡಿಸೆಂಬರ್ 2020, 5:35 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿರುವ ದೇವಾಡಿಗ ಸಮುದಾಯದ ಏಳಿಗೆಗಾಗಿ ದೇವಾಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಬೆಂಗಳೂರು ದೇವಾಡಿಗ ಸಂಘ ಒತ್ತಾಯಿಸಿದೆ.

ಸಂಘದ ರಜನಿಕಾಂತ್‌, ‘ಉಡುಪಿ ಬಾರ್ಕೂರಿನ ಏಕನಾಥೇಶ್ವರಿ ದೇವಸ್ಥಾನದಲ್ಲಿ ನಡೆದ ದೇವಾಡಿಗ ಸಂಘಗಳ ಪದಾಧಿಕಾರಿಗಳು ಹಾಗೂ ದೇವಾಡಿಗ ಸಮಾಜದ ಮುಖಂಡರ ಸಭೆಯಲ್ಲಿ ಸಮುದಾಯಕ್ಕೆ ನಿಗಮ ರಚಿಸುವ ಸಂಬಂಧ ಒತ್ತಡ ಹೇರಲು ತೀರ್ಮಾನಿಸಲಾಯಿತು’ ಎಂದರು.

‘ಶೀಘ್ರವೇ ಸಮುದಾಯದ ನಿಯೋಗ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT