<p><strong>ಬೆಂಗಳೂರು</strong>: 1995ರ ನೌಕರರ ಪಿಂಚಣಿ ಯೋಜನೆಯಡಿ(ಇಪಿಎಸ್-95) ನೌಕರರ ಪಿಂಚಣಿ ಪರಿಷ್ಕರಣೆ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಅನುಷ್ಠಾನ ವಿಳಂಬ ಮಾಡಿದರೆ ಹೋರಾಟಕ್ಕೆ ಇಳಿಯಲು ಇಪಿಎಸ್–95 (ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ) ನಿವೃತ್ತ ನೌಕರರು ನಿರ್ಧರಿಸಿದರು.</p>.<p>ಲಾಲ್ಬಾಗ್ನಲ್ಲಿ ಭಾನುವಾರ ಸಭೆ ನಡೆಸಿದ ನಿವೃತ್ತ ನೌಕರರು, ‘ಸುಪ್ರೀಂ ಕೋರ್ಟ್ ತೀರ್ಪು ನೀಡಿ ಒಂದು ತಿಂಗಳಾದರೂ ಪಿಂಚಣಿ ಪರಿಷ್ಕರಣೆಗೆ ನೌಕರರ ಭವಿಷ್ಯ ನಿಧಿ ಸಂಘಟನೆಯು(ಇಪಿಎಫ್ಒ) ಯಾವುದೇ ಕ್ರಮ ಕೈಗೊಂಡಿಲ್ಲ. ಪಿಂಚಣಿದಾರರಿಗೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸುಪ್ರೀಂ ಕೋರ್ಟ್ ನೀಡಿರುವ ಎಂಟು ವಾರಗಳ ಗಡುವಿನೊಳಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ಹೋರಾಟಕ್ಕೆ ಸಿದ್ಧರಾಗುವುದಾಗಿ ಎಚ್ಚರಿಸಿದರು.</p>.<p>ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ಶ್ರೀಪಾದರೇಣು, ಸಂಘದ ಅಧ್ಯಕ್ಷ ಶಂಕರ್ಕುಮಾರ್, ಕಾರ್ಯಾಧ್ಯಕ್ಷ ನಂಜುಂಡೇಗೌಡ, ಉಪಾಧ್ಯಕ್ಷ ಸುಬ್ಬಣ್ಣ, ಕಾರ್ಯದರ್ಶಿ ರಂಗನಾಥ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 1995ರ ನೌಕರರ ಪಿಂಚಣಿ ಯೋಜನೆಯಡಿ(ಇಪಿಎಸ್-95) ನೌಕರರ ಪಿಂಚಣಿ ಪರಿಷ್ಕರಣೆ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಅನುಷ್ಠಾನ ವಿಳಂಬ ಮಾಡಿದರೆ ಹೋರಾಟಕ್ಕೆ ಇಳಿಯಲು ಇಪಿಎಸ್–95 (ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ) ನಿವೃತ್ತ ನೌಕರರು ನಿರ್ಧರಿಸಿದರು.</p>.<p>ಲಾಲ್ಬಾಗ್ನಲ್ಲಿ ಭಾನುವಾರ ಸಭೆ ನಡೆಸಿದ ನಿವೃತ್ತ ನೌಕರರು, ‘ಸುಪ್ರೀಂ ಕೋರ್ಟ್ ತೀರ್ಪು ನೀಡಿ ಒಂದು ತಿಂಗಳಾದರೂ ಪಿಂಚಣಿ ಪರಿಷ್ಕರಣೆಗೆ ನೌಕರರ ಭವಿಷ್ಯ ನಿಧಿ ಸಂಘಟನೆಯು(ಇಪಿಎಫ್ಒ) ಯಾವುದೇ ಕ್ರಮ ಕೈಗೊಂಡಿಲ್ಲ. ಪಿಂಚಣಿದಾರರಿಗೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸುಪ್ರೀಂ ಕೋರ್ಟ್ ನೀಡಿರುವ ಎಂಟು ವಾರಗಳ ಗಡುವಿನೊಳಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ಹೋರಾಟಕ್ಕೆ ಸಿದ್ಧರಾಗುವುದಾಗಿ ಎಚ್ಚರಿಸಿದರು.</p>.<p>ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ಶ್ರೀಪಾದರೇಣು, ಸಂಘದ ಅಧ್ಯಕ್ಷ ಶಂಕರ್ಕುಮಾರ್, ಕಾರ್ಯಾಧ್ಯಕ್ಷ ನಂಜುಂಡೇಗೌಡ, ಉಪಾಧ್ಯಕ್ಷ ಸುಬ್ಬಣ್ಣ, ಕಾರ್ಯದರ್ಶಿ ರಂಗನಾಥ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>