<p><strong>ಯಲಹಂಕ</strong>: ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಕ್ರಾಸ್ ಬಳಿ ಮೆಟ್ರೊ ರೈಲು ನಿಲ್ದಾಣ ಸ್ಥಾಪಿಸಬೇಕು ಎಂದು ಕೋರಿ, ರೈತ ಮುಖಂಡರು ಹಾಗೂ ಸುತ್ತಮುತ್ತಲ ಗ್ರಾಮಗಳ ಮುಖಂಡರು ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಸಲ್ಲಿಸಿದ್ದಾರೆ.</p>.<p>ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಬಿ.ಜಿ.ನಂಜುಂಡಪ್ಪ ಸೇರಿ ಮುಖಂಡರಾದ ಬಿ.ಸಿ.ಶಿವರಾಜ್, ಟಿ.ಪಿ.ಪ್ರಕಾಶ್, ಪಟೇಲ್.ಪಿ ಹಾಗೂ ಚಂದ್ರು. ಬಿ.ಕೆ ಅವರು ಅರ್ಜಿ(ಪಿಐಎಲ್)ಸಲ್ಲಿಸಿದ್ದಾರೆ.</p>.<p>‘ಉದ್ದೇಶಿತ ನಿಲ್ದಾಣದ ವ್ಯಾಪ್ತಿಯಲ್ಲಿ ಸುಮಾರು 40 ಗ್ರಾಮಗಳಿದ್ದು, ಒಂದೂವರೆ ಲಕ್ಷಕ್ಕೂ ಹೆಚ್ಚಿನ ಜನರು ಈ ಭಾಗದಲ್ಲಿ ವಾಸಿಸುತ್ತಿದ್ದಾರೆ. ಇಲ್ಲಿಗೆ ಮೆಟ್ರೊ ನಿಲ್ದಾಣ ಅತ್ಯಂತ ಅವಶ್ಯವಿರುವ ಕಾರಣ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ’ ಎಂದು ರೈತಮುಖಂಡ ಬಿ.ಜಿ.ನಂಜುಂಡಪ್ಪ ತಿಳಿಸಿದರು.</p>.<p>ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಮೂರ್ನಾಲ್ಕು ತಿಂಗಳುಗಳಿಂದ ಸಂಬಂಧಪಟ್ಟ ಕಚೇರಿಗಳ ಅಧಿಕಾರಿಗಳಿಗೆ ಸಾಕಷ್ಟುಬಾರಿ ಮನವಿಪತ್ರ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ಭೇಟಿಮಾಡಿ ಮನವಿ ನೀಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಕ್ರಾಸ್ ಬಳಿ ಮೆಟ್ರೊ ರೈಲು ನಿಲ್ದಾಣ ಸ್ಥಾಪಿಸಬೇಕು ಎಂದು ಕೋರಿ, ರೈತ ಮುಖಂಡರು ಹಾಗೂ ಸುತ್ತಮುತ್ತಲ ಗ್ರಾಮಗಳ ಮುಖಂಡರು ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಸಲ್ಲಿಸಿದ್ದಾರೆ.</p>.<p>ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಬಿ.ಜಿ.ನಂಜುಂಡಪ್ಪ ಸೇರಿ ಮುಖಂಡರಾದ ಬಿ.ಸಿ.ಶಿವರಾಜ್, ಟಿ.ಪಿ.ಪ್ರಕಾಶ್, ಪಟೇಲ್.ಪಿ ಹಾಗೂ ಚಂದ್ರು. ಬಿ.ಕೆ ಅವರು ಅರ್ಜಿ(ಪಿಐಎಲ್)ಸಲ್ಲಿಸಿದ್ದಾರೆ.</p>.<p>‘ಉದ್ದೇಶಿತ ನಿಲ್ದಾಣದ ವ್ಯಾಪ್ತಿಯಲ್ಲಿ ಸುಮಾರು 40 ಗ್ರಾಮಗಳಿದ್ದು, ಒಂದೂವರೆ ಲಕ್ಷಕ್ಕೂ ಹೆಚ್ಚಿನ ಜನರು ಈ ಭಾಗದಲ್ಲಿ ವಾಸಿಸುತ್ತಿದ್ದಾರೆ. ಇಲ್ಲಿಗೆ ಮೆಟ್ರೊ ನಿಲ್ದಾಣ ಅತ್ಯಂತ ಅವಶ್ಯವಿರುವ ಕಾರಣ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ’ ಎಂದು ರೈತಮುಖಂಡ ಬಿ.ಜಿ.ನಂಜುಂಡಪ್ಪ ತಿಳಿಸಿದರು.</p>.<p>ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಮೂರ್ನಾಲ್ಕು ತಿಂಗಳುಗಳಿಂದ ಸಂಬಂಧಪಟ್ಟ ಕಚೇರಿಗಳ ಅಧಿಕಾರಿಗಳಿಗೆ ಸಾಕಷ್ಟುಬಾರಿ ಮನವಿಪತ್ರ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ಭೇಟಿಮಾಡಿ ಮನವಿ ನೀಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>