<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಪುರುಷರಿಗಾಗಿ ಪ್ರತ್ಯೇಕ ಆಯೋಗ ಸ್ಥಾಪಿಸಿ, ಅನುದಾನ ನೀಡಬೇಕು. ಪುರುಷರ ಮೇಲಾಗುವ ದೌರ್ಜನ್ಯ ಮತ್ತು ಅಪರಾಧ ತಡೆಯಲು ಪ್ರತ್ಯೇಕ ಸಹಾಯವಾಣಿ ಸ್ಥಾಪಿಸಿಬೇಕು’ ಎಂದು ಸೇವ್ ಇಂಡಿಯನ್ ಫ್ಯಾಮಿಲಿ–ಕರ್ನಾಟಕ ಆಗ್ರಹಿಸಿದೆ.</p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಸದಸ್ಯ ನಿತೀನ್, ‘ಮಹಿಳೆಯರಿಗಿಂತ ಎರಡು ಪಟ್ಟು ಹೆಚ್ಚು ಪುರುಷರ ಮೇಲೆ ಕೌಟುಂಬಿಕ ದೌರ್ಜನ್ಯಗಳಾಗುತ್ತಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ವರದಿ ಪ್ರಕಾರ ಕಳೆದ 5 ವರ್ಷಗಳಲ್ಲಿ ಶೇ 2ರಷ್ಟು ಪುರುಷರ ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆಗಳೇ ಕಾರಣ’ ಎಂದು ತಿಳಿಸಿದರು.</p>.<p>‘ದೇಶದಲ್ಲಿ ಮಹಿಳೆಯರನ್ನು ರಕ್ಷಣೆ ಮಾಡಲು ಸಾಕಷ್ಟು ಕಾನೂನುಗಳನ್ನು ರಚಿಸಲಾಗಿದೆ. ಆದರೆ, ಮಹಿಳೆಯರಿಂದ ಪುರುಷರ ಮೇಲಾಗುವ ದೌರ್ಜನ್ಯವನ್ನು ತಡೆಯಲು ಸ್ಪಷ್ಟವಾದ ಕಾನೂನುಗಳಿಲ್ಲ. ಕೌಟುಂಬಿಕ ಕಾನೂನುಗಳ ಅಡಿಯಲ್ಲಿ ಪುರುಷರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>‘ಲಿಂಗ ಸಮಾನತೆಯ ಹೆಸರಿನಲ್ಲಿ ಹಲವಾರು ಕಠಿಣ ಕಾನೂನುಗಳನ್ನು ರೂಪಿಸಲಾಗಿದೆ. ಈ ವಿಷಯದಲ್ಲಿ ಪುರುಷರಿಗೆ ಆ ಹಕ್ಕುಗಳ ಲಾಭ ಸಿಗುತ್ತಿಲ್ಲ. ಭಾರತದಲ್ಲಿ ಪುರುಷರ ಈ ಸ್ಥಿತಿಗತಿಯ ಬಗ್ಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಸಂಘದ ಸದಸ್ಯರಾದ ಸೋಮನಾಥ್, ಮಣಿಕಂದನ್, ಸುರ್ಲೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಪುರುಷರಿಗಾಗಿ ಪ್ರತ್ಯೇಕ ಆಯೋಗ ಸ್ಥಾಪಿಸಿ, ಅನುದಾನ ನೀಡಬೇಕು. ಪುರುಷರ ಮೇಲಾಗುವ ದೌರ್ಜನ್ಯ ಮತ್ತು ಅಪರಾಧ ತಡೆಯಲು ಪ್ರತ್ಯೇಕ ಸಹಾಯವಾಣಿ ಸ್ಥಾಪಿಸಿಬೇಕು’ ಎಂದು ಸೇವ್ ಇಂಡಿಯನ್ ಫ್ಯಾಮಿಲಿ–ಕರ್ನಾಟಕ ಆಗ್ರಹಿಸಿದೆ.</p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಸದಸ್ಯ ನಿತೀನ್, ‘ಮಹಿಳೆಯರಿಗಿಂತ ಎರಡು ಪಟ್ಟು ಹೆಚ್ಚು ಪುರುಷರ ಮೇಲೆ ಕೌಟುಂಬಿಕ ದೌರ್ಜನ್ಯಗಳಾಗುತ್ತಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ವರದಿ ಪ್ರಕಾರ ಕಳೆದ 5 ವರ್ಷಗಳಲ್ಲಿ ಶೇ 2ರಷ್ಟು ಪುರುಷರ ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆಗಳೇ ಕಾರಣ’ ಎಂದು ತಿಳಿಸಿದರು.</p>.<p>‘ದೇಶದಲ್ಲಿ ಮಹಿಳೆಯರನ್ನು ರಕ್ಷಣೆ ಮಾಡಲು ಸಾಕಷ್ಟು ಕಾನೂನುಗಳನ್ನು ರಚಿಸಲಾಗಿದೆ. ಆದರೆ, ಮಹಿಳೆಯರಿಂದ ಪುರುಷರ ಮೇಲಾಗುವ ದೌರ್ಜನ್ಯವನ್ನು ತಡೆಯಲು ಸ್ಪಷ್ಟವಾದ ಕಾನೂನುಗಳಿಲ್ಲ. ಕೌಟುಂಬಿಕ ಕಾನೂನುಗಳ ಅಡಿಯಲ್ಲಿ ಪುರುಷರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>‘ಲಿಂಗ ಸಮಾನತೆಯ ಹೆಸರಿನಲ್ಲಿ ಹಲವಾರು ಕಠಿಣ ಕಾನೂನುಗಳನ್ನು ರೂಪಿಸಲಾಗಿದೆ. ಈ ವಿಷಯದಲ್ಲಿ ಪುರುಷರಿಗೆ ಆ ಹಕ್ಕುಗಳ ಲಾಭ ಸಿಗುತ್ತಿಲ್ಲ. ಭಾರತದಲ್ಲಿ ಪುರುಷರ ಈ ಸ್ಥಿತಿಗತಿಯ ಬಗ್ಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಸಂಘದ ಸದಸ್ಯರಾದ ಸೋಮನಾಥ್, ಮಣಿಕಂದನ್, ಸುರ್ಲೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>