‘ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿವೆ. ಆದರೆ, ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡುವಂತೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೂ ನಿರ್ದೇಶಿಸಬೇಕು' ಎಂದು ಅವರು ಮನವಿ ಮಾಡಿದ್ದಾರೆ. ಬಹುತೇಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪಾಠ– ಪ್ರವಚನ ಮುಗಿಯವ ಮೊದಲೇ ಮೊದಲ ಸೆಮಿಸ್ಟರ್ ಪೂರ್ಣಗೊಳಿಸಿ, ಪರೀಕ್ಷೆಗಳನ್ನು ನಡೆಸಲು ಮುಂದಾದ ಬಗ್ಗೆ ‘ಪ್ರಜಾವಾಣಿ’ಯ ಫೆ.6ರ ಸಂಚಿಕೆಯಲ್ಲಿ ‘ಪಾಠವೇ ಮುಗಿದಿಲ್ಲ: ಪರೀಕ್ಷೆಗೆ ಆತುರ’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.