<p><strong>ಬೆಂಗಳೂರು:</strong> ಕೈಗಾರಿಕೆ ವಲಯಕ್ಕೆ ನೀಡುತ್ತಿರುವ ರಿಯಾಯಿತಿ ದರದ ವಿದ್ಯುತ್ ಸೌಲಭ್ಯಗಳನ್ನು ಕನಿಷ್ಠ 5 ರಿಂದ 10 ವರ್ಷಗಳ ಅವಧಿಗೆ ವಿಸ್ತರಿಸಬೇಕು ಎಂದು ಪೀಣ್ಯ ಕೈಗಾರಿಕೆ ವಲಯದ ಪ್ರತಿನಿಧಿಗಳು ಬೆಸ್ಕಾಂಗೆ ಮನವಿ ಮಾಡಿದ್ದಾರೆ.</p>.<p>ಪೀಣ್ಯ ಕೈಗಾರಿಕೆ ವಲಯದ ಪ್ರತಿನಿಧಿಗಳ ಜತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ. ರಾಜೇಂದ್ರ ಚೋಳನ್ ಮತ್ತು ಹಿರಿಯ ಅಧಿಕಾರಿಗಳು ಮಂಗಳವಾರ ನಡೆಸಿದ ಸಭೆಯಲ್ಲಿ ಉದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.</p>.<p>ಪೀಣ್ಯ ವಲಯದ ಉಪವಿಭಾಗ–4ರಲ್ಲಿ ವಿದ್ಯುತ್ ವ್ಯತ್ಯಯದ ಸಮಸ್ಯೆಯನ್ನು ಸರಿಪಡಿಸಲಾಗಿದೆ. ಪೀಣ್ಯ ಕೈಗಾರಿಕೆ ಪ್ರದೇಶಗಳಿಗೆ ಈಗ ತಡೆರಹಿತ ವಿದ್ಯುತ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ ಕುಂಬಳಗೋಡು ವಲಯದ ವಿದ್ಯುತ್ ಸಮಸ್ಯೆಯನ್ನು ಸರಿಪಡಿಸಲಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು.</p>.<p>ಪೀಣ್ಯ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಮೀಟರ್ ಪರೀಕ್ಷೆ (ಎಂಟಿ) ಮತ್ತು ವಿಚಕ್ಷಣ ದಳ ಸಿಬ್ಬಂದಿಯಿಂದಾಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಆಂತರಿಕ ಸಮಿತಿಯೊಂದನ್ನು ರಚಿಸುವುದಾಗಿ ರಾಜೇಂದ್ರ ಚೋಳನ್ ಭರವಸೆ ನೀಡಿದರು.</p>.<p>ಬೆಸ್ಕಾಂ ನಿರ್ದೇಶಕ (ತಾಂತ್ರಿಕ) ಅವರ ಅಧ್ಯಕ್ಷತೆಯ ಸಮಿತಿಯಲ್ಲಿ ಪೀಣ್ಯ ಕೈಗಾರಿಕೆ ವಲಯದ ಪ್ರತಿನಿಧಿಗಳು ಸದಸ್ಯರಾಗಿರುತ್ತಾರೆ. ಕೈಗಾರಿಕೆ ವಲಯದ ಪ್ರತಿನಿಧಿಗಳು ಎದುರಿಸುತ್ತಿರುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಈ ಸಮಿತಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೈಗಾರಿಕೆ ವಲಯಕ್ಕೆ ನೀಡುತ್ತಿರುವ ರಿಯಾಯಿತಿ ದರದ ವಿದ್ಯುತ್ ಸೌಲಭ್ಯಗಳನ್ನು ಕನಿಷ್ಠ 5 ರಿಂದ 10 ವರ್ಷಗಳ ಅವಧಿಗೆ ವಿಸ್ತರಿಸಬೇಕು ಎಂದು ಪೀಣ್ಯ ಕೈಗಾರಿಕೆ ವಲಯದ ಪ್ರತಿನಿಧಿಗಳು ಬೆಸ್ಕಾಂಗೆ ಮನವಿ ಮಾಡಿದ್ದಾರೆ.</p>.<p>ಪೀಣ್ಯ ಕೈಗಾರಿಕೆ ವಲಯದ ಪ್ರತಿನಿಧಿಗಳ ಜತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ. ರಾಜೇಂದ್ರ ಚೋಳನ್ ಮತ್ತು ಹಿರಿಯ ಅಧಿಕಾರಿಗಳು ಮಂಗಳವಾರ ನಡೆಸಿದ ಸಭೆಯಲ್ಲಿ ಉದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.</p>.<p>ಪೀಣ್ಯ ವಲಯದ ಉಪವಿಭಾಗ–4ರಲ್ಲಿ ವಿದ್ಯುತ್ ವ್ಯತ್ಯಯದ ಸಮಸ್ಯೆಯನ್ನು ಸರಿಪಡಿಸಲಾಗಿದೆ. ಪೀಣ್ಯ ಕೈಗಾರಿಕೆ ಪ್ರದೇಶಗಳಿಗೆ ಈಗ ತಡೆರಹಿತ ವಿದ್ಯುತ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ ಕುಂಬಳಗೋಡು ವಲಯದ ವಿದ್ಯುತ್ ಸಮಸ್ಯೆಯನ್ನು ಸರಿಪಡಿಸಲಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು.</p>.<p>ಪೀಣ್ಯ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಮೀಟರ್ ಪರೀಕ್ಷೆ (ಎಂಟಿ) ಮತ್ತು ವಿಚಕ್ಷಣ ದಳ ಸಿಬ್ಬಂದಿಯಿಂದಾಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಆಂತರಿಕ ಸಮಿತಿಯೊಂದನ್ನು ರಚಿಸುವುದಾಗಿ ರಾಜೇಂದ್ರ ಚೋಳನ್ ಭರವಸೆ ನೀಡಿದರು.</p>.<p>ಬೆಸ್ಕಾಂ ನಿರ್ದೇಶಕ (ತಾಂತ್ರಿಕ) ಅವರ ಅಧ್ಯಕ್ಷತೆಯ ಸಮಿತಿಯಲ್ಲಿ ಪೀಣ್ಯ ಕೈಗಾರಿಕೆ ವಲಯದ ಪ್ರತಿನಿಧಿಗಳು ಸದಸ್ಯರಾಗಿರುತ್ತಾರೆ. ಕೈಗಾರಿಕೆ ವಲಯದ ಪ್ರತಿನಿಧಿಗಳು ಎದುರಿಸುತ್ತಿರುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಈ ಸಮಿತಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>