ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧುಸ್ವಾಮಿ ವಿರುದ್ಧ ಎಫ್ಐಆರ್‌ ದಾಖಲಿಸಲು ಆಗ್ರಹ

Last Updated 20 ಮೇ 2020, 20:50 IST
ಅಕ್ಷರ ಗಾತ್ರ

ಬೆಂಗಳೂರು: ರೈತ ಮಹಿಳೆಯನ್ನು ನಿಂದಿಸಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕೆಂದು ಕರ್ನಾಟಕ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಸಚಿನ್ ಮೀಗಾ ಒತ್ತಾಯಿಸಿದ್ದಾರೆ.

ಇಲ್ಲವಾದರೆ ಶುಕ್ರವಾರ ಬೆಳಿಗ್ಗೆ ರಾಜ್ಯ ಪೊಲಿಸ್‌ ಮಹಾನಿರ್ದೇಶಕ ‍ಪ್ರವೀಣ್‌ ಸೂದ್‌ ಅವರ ಕಚೇರಿ ಮುಂದೆ ಸತ್ಯಾಗ್ರಹ ನಡೆಸಲಾಗುವುದು. ಮಾಧುಸ್ವಾಮಿ ರೈತ ಮಹಿಳೆ ಬಳಿ ಕ್ಷಮೆ ಯಾಚಿಸಬೇಕು ಎಂದು ಮೀಗಾ ಹೇಳಿದ್ದಾರೆ.

ಶರವಣ ಆಕ್ರೋಶ:ಅಹವಾಲು ಸಲ್ಲಿಸಲು ಬಂದ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿ ಅವರ ವರ್ತನೆ ಅಕ್ಷಮ್ಯ. ಮಹಿಳೆ ಬಳಿ ಸಚಿವರು ಕ್ಷಮೆ ಯಾಚಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಆಗ್ರಹಿಸಿದ್ದಾರೆ.

ರೈತ ನಮ್ಮ ದೇಶದ ಬೆನ್ನೆಲುಬು ಎಂದರೆ ಮಾತ್ರ ಸಾಲದು, ಅವರಿಗೆ ಸಲ್ಲಬೇಕಾದ ಗೌರವವನ್ನು ನಾವು ಸಲ್ಲಿಸಲೇಬೇಕು ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT