ರಾಷ್ಟ್ರೀಯ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಜಿಎಸ್ಎಂ ಸ್ವಾಮಿ, ‘ದೇಶದ ಅಭಿವೃದ್ಧಿಯಲ್ಲಿ ನಿವೃತ್ತರು ಸಮರ್ಪಣಾ ಭಾವದಿಂದ ಕೆಲಸ ಮಾಡಿದ್ದಾರೆ. ಕೇಂದ್ರ ಸರ್ಕಾರ ನಮ್ಮೆಲ್ಲರ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ಈಡೇರಿಸಬೇಕಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಹೊಸ ಸರ್ಕಾರ ರಚನೆಯಾದ ನಂತರ ರಾಜ್ಯದ ಪ್ರತಿಯೊಬ್ಬ ಸಂಸದನನ್ನು ಭೇಟಿಯಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಗುವುದು’ ಎಂದರು.