<p><strong>ಬೆಂಗಳೂರು:</strong> ಸೂಕ್ಷ್ಮ, ಅತಿಸೂಕ್ಷ್ಮ ಸಮುದಾಯಗಳಾಗಿರುವ ಅಲೆಮಾರಿಗಳಿಗೆ 2026–27ನೇ ಸಾಲಿನ ಬಜೆಟ್ನಲ್ಲಿ ಆದ್ಯತೆ ನೀಡಬೇಕು. ಅಲೆಮಾರಿಗಳಿಗೆ ಪ್ರತ್ಯೇಕ ಆಯೋಗ ರಚಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಅಲೆಮಾರಿ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರ ಮನವಿ ಮಾಡಿದರು.</p>.<p>ಈ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಮಾಡಿ ಅನುದಾನ ಮೀಸಲಿರಿಸಬೇಕು. ಉಚಿತವಾಗಿ ನಿವೇಶನ, ವಸತಿ, ವಸತಿಶಾಲೆ ಒದಗಿಸಬೇಕು. ಅಲೆಮಾರಿಗಳಿಗೆ ಪ್ರತ್ಯೇಕ ಆಯೋಗ ಮಾಡಬೇಕು. ಸಂಶೋಧನಾ ಕೇಂದ್ರ, ಅಧ್ಯಯನ ಸಂಸ್ಥೆ, ಅಲೆಮಾರಿ ಆಕಾಡೆಮಿ ಸ್ಥಾಪನೆಗೆ ಒತ್ತು ನೀಡಬೇಕು. ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಅಲೆಮಾರಿ ಅಭಿವೃದ್ಧಿ ನಿಗಮದ ಹಾಲಿ ಅಧ್ಯಕ್ಷರ ಅವಧಿ ಮಾರ್ಚ್ನಲ್ಲಿ ಕೊನೆಗೊಳ್ಳಲಿದೆ. ಆ ಸ್ಥಾನಕ್ಕೆ ಸೂಕ್ಷ್ಮ, ಅತಿ ಸೂಕ್ಷ್ಮ ಸಮುದಾಯಕ್ಕೆ ಸೇರಿರುವವರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಪದಾಧಿಕಾರಿಗಳಾದ ಮಂಜುನಾಥ್ ದಯಾತ್ಕರ್ ಅಲೆಮಾರಿ, ಬಸವರಾಜ್ ನಾರಾಯಣ್ಕರ್, ಹನುಮಂತ, ಕೃಷ್ಣಪ್ಪ, ಶಾಂತರಾಜ್, ದುರ್ಗೇಶಿ ವಿಭೂತಿ, ಆಂಜನೇಯ, ವೆಂಕಟೇಶ್, ರಂಗನಾಥ್, ರಾಮಯ್ಯ, ಚಿನ್ನ, ಶೇಷಪ್ಪ, ಸಾವಿತ್ರಿ ರತ್ನಾಕರ, ಶಾರದಾ, ಮಂಜುಳಾ ಸಹಿತ ಅನೇಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸೂಕ್ಷ್ಮ, ಅತಿಸೂಕ್ಷ್ಮ ಸಮುದಾಯಗಳಾಗಿರುವ ಅಲೆಮಾರಿಗಳಿಗೆ 2026–27ನೇ ಸಾಲಿನ ಬಜೆಟ್ನಲ್ಲಿ ಆದ್ಯತೆ ನೀಡಬೇಕು. ಅಲೆಮಾರಿಗಳಿಗೆ ಪ್ರತ್ಯೇಕ ಆಯೋಗ ರಚಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಅಲೆಮಾರಿ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರ ಮನವಿ ಮಾಡಿದರು.</p>.<p>ಈ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಮಾಡಿ ಅನುದಾನ ಮೀಸಲಿರಿಸಬೇಕು. ಉಚಿತವಾಗಿ ನಿವೇಶನ, ವಸತಿ, ವಸತಿಶಾಲೆ ಒದಗಿಸಬೇಕು. ಅಲೆಮಾರಿಗಳಿಗೆ ಪ್ರತ್ಯೇಕ ಆಯೋಗ ಮಾಡಬೇಕು. ಸಂಶೋಧನಾ ಕೇಂದ್ರ, ಅಧ್ಯಯನ ಸಂಸ್ಥೆ, ಅಲೆಮಾರಿ ಆಕಾಡೆಮಿ ಸ್ಥಾಪನೆಗೆ ಒತ್ತು ನೀಡಬೇಕು. ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಅಲೆಮಾರಿ ಅಭಿವೃದ್ಧಿ ನಿಗಮದ ಹಾಲಿ ಅಧ್ಯಕ್ಷರ ಅವಧಿ ಮಾರ್ಚ್ನಲ್ಲಿ ಕೊನೆಗೊಳ್ಳಲಿದೆ. ಆ ಸ್ಥಾನಕ್ಕೆ ಸೂಕ್ಷ್ಮ, ಅತಿ ಸೂಕ್ಷ್ಮ ಸಮುದಾಯಕ್ಕೆ ಸೇರಿರುವವರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಪದಾಧಿಕಾರಿಗಳಾದ ಮಂಜುನಾಥ್ ದಯಾತ್ಕರ್ ಅಲೆಮಾರಿ, ಬಸವರಾಜ್ ನಾರಾಯಣ್ಕರ್, ಹನುಮಂತ, ಕೃಷ್ಣಪ್ಪ, ಶಾಂತರಾಜ್, ದುರ್ಗೇಶಿ ವಿಭೂತಿ, ಆಂಜನೇಯ, ವೆಂಕಟೇಶ್, ರಂಗನಾಥ್, ರಾಮಯ್ಯ, ಚಿನ್ನ, ಶೇಷಪ್ಪ, ಸಾವಿತ್ರಿ ರತ್ನಾಕರ, ಶಾರದಾ, ಮಂಜುಳಾ ಸಹಿತ ಅನೇಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>