<p><strong>ಬೆಂಗಳೂರು</strong>: 'ನ್ಯಾಯಾಲಯಗಳ ಆದೇಶಗಳನ್ನು ಉಲ್ಲಂಘಿಸಿ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಿರುವ ಬಿಬಿಎಂಪಿ, ಅದೇ ಸ್ಥಳದಲ್ಲಿ ವ್ಯಾಪಾರ ಮಾಡಲು ಮತ್ತೆ ಅವಕಾಶ ಮಾಡಿಕೊಡಬೇಕು. ನಷ್ಟಕ್ಕೆ ಪರಿಹಾರವನ್ನೂ ನೀಡಬೇಕು’ ಎಂದು ಬೀದಿ ವ್ಯಾಪಾರಿಗಳು ಆಗ್ರಹಿಸಿದರು.</p>.<p>ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘಟನೆ ಸದಸ್ಯರು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟಿಸಿದರು.</p>.<p>‘ಜಯನಗರ, ಮಹದೇವಪುರ, ಮಲ್ಲೇಶ್ವರ , ಬನಶಂಕರಿ, ಮೂಡಲಪಾಳ್ಯ ಹಾಗೂ ಇತರೆ ಪ್ರದೇಶಗಳಲ್ಲಿ ಬೀದಿ ವ್ಯಾಪಾರಿಗಳನ್ನು ತೆರವು ಮಾಡಲಾಗಿದ್ದು, ಅಲ್ಲೇ ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು. ಪ್ರತಿ ಪ್ರದೇಶ ವ್ಯಾಪಾರ ಸಮಿತಿ ಅಡಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಬಿಬಿಎಂಪಿ ನೇತೃತ್ವದಲ್ಲಿ ನಡೆಯಬೇಕು. ಅಲ್ಲಿಯವರೆಗೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬಾರದು. ಗುರುತಿನ ಚೀಟಿ / ವ್ಯಾಪಾರದ ಪ್ರಮಾಣ ಪತ್ರಗಳನ್ನು ನವೀಕರಿಸಬೇಕು. ಸಮೀಕ್ಷೆ ಕುರಿತು ಬೀದಿ ವ್ಯಾಪಾರಿಗಳ ಸಂಘಟನೆಗಳೊಂದಿಗೆ ಸಭೆ ನಡೆಸಬೇಕು ಮತ್ತು ಅವರ ಸಲಹೆ ಸೂಚನೆಗಳನ್ನು ಪಡೆಯಬೇಕು’ ಎಂದು ಬೇಡಿಕೆ ಸಲ್ಲಿಸಿದರು.</p>.<p>‘ಬೀದಿ ವ್ಯಾಪಾರ ಮಾಡುವ ಹಕ್ಕು ಸಂವಿಧಾನದಲ್ಲಿ ನಮಗೆ ನೀಡಲಾಗಿದೆ. ಬೀದಿ ವ್ಯಾಪಾರಸ್ಥರ ಹಕ್ಕುಗಳನ್ನು ರಕ್ಷಿಸಬೇಕೆಂದು ಹಲವಾರು ನ್ಯಾಯಾಲಯಗಳ ತೀರ್ಪುಗಳು ಹೇಳಿವೆ’ ಎಂದು ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್. ಬಾಬು ಹೇಳಿದರು.</p>.<p>‘ಬೀದಿ ವ್ಯಾಪಾರಿಗಳನ್ನು ರಕ್ಷಿಸುವ ಕಾನೂನನ್ನು ಬಿಬಿಎಂಪಿ ಬಹಿರಂಗವಾಗಿ ಉಲ್ಲಂಘಿಸಿ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ’ ಎಂದು ಸಂಘದ ಕಾರ್ಯದರ್ಶಿ ಪಿ.ಪಿ. ಅಪ್ಪಣ್ಣ ದೂರಿದರು.</p>.<p>ಬೀದಿ ವ್ಯಾಪಾರಿಗಳಿಗೆ ನೀಡಿರುವ ಗುರುತಿನ ಚೀಟಿ, ವ್ಯಾಪಾರದ ಪ್ರಮಾಣಪತ್ರವನ್ನು ನವೀಕರಿಸಬೇಕು ಎಂದು ಸಂಘದ ಉಪಾಧ್ಯಕ್ಷೆ ಶಶಿಕಲಾ ಆಗ್ರಹಿಸಿದರು.</p>.<p>‘ನಾವು ಬೀದಿ ಬದಿಗಳಲ್ಲಿ ವ್ಯಾಪಾರ ಮಾಡದಿದ್ದರೆ ಮಧ್ಯಮವರ್ಗದವರು ಮಾಲ್, ಮಾರ್ಟ್ಗಳಿಗೆ ಹೋಗಿ ವಸ್ತುಗಳನ್ನು ಖರೀದಿಸಲು ಸಾಧ್ಯವಾಗುವುದಿಲ್ಲ’ ಎಂದು ಸಂಘದ ಜಂಟಿ ಕಾರ್ಯದರ್ಶಿ ಸಯ್ಯದ್ ಝಮೀರ್ ಹೇಳಿದರು.</p>.<p>‘ಬಿಬಿಎಂಪಿ ಮುಖ್ಯ ಆಯುಕ್ತರೊಂದಿಗೆ ಸಭೆ ನಡೆಸಿ, ನಿಮ್ಮ ಬೇಡಿಕೆಗಳನ್ನು ಚರ್ಚಿಸಲಾಗುವುದು’ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರೆಡ್ಡಿ ಶಂಕರಬಾಬು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ನ್ಯಾಯಾಲಯಗಳ ಆದೇಶಗಳನ್ನು ಉಲ್ಲಂಘಿಸಿ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಿರುವ ಬಿಬಿಎಂಪಿ, ಅದೇ ಸ್ಥಳದಲ್ಲಿ ವ್ಯಾಪಾರ ಮಾಡಲು ಮತ್ತೆ ಅವಕಾಶ ಮಾಡಿಕೊಡಬೇಕು. ನಷ್ಟಕ್ಕೆ ಪರಿಹಾರವನ್ನೂ ನೀಡಬೇಕು’ ಎಂದು ಬೀದಿ ವ್ಯಾಪಾರಿಗಳು ಆಗ್ರಹಿಸಿದರು.</p>.<p>ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘಟನೆ ಸದಸ್ಯರು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟಿಸಿದರು.</p>.<p>‘ಜಯನಗರ, ಮಹದೇವಪುರ, ಮಲ್ಲೇಶ್ವರ , ಬನಶಂಕರಿ, ಮೂಡಲಪಾಳ್ಯ ಹಾಗೂ ಇತರೆ ಪ್ರದೇಶಗಳಲ್ಲಿ ಬೀದಿ ವ್ಯಾಪಾರಿಗಳನ್ನು ತೆರವು ಮಾಡಲಾಗಿದ್ದು, ಅಲ್ಲೇ ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು. ಪ್ರತಿ ಪ್ರದೇಶ ವ್ಯಾಪಾರ ಸಮಿತಿ ಅಡಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಬಿಬಿಎಂಪಿ ನೇತೃತ್ವದಲ್ಲಿ ನಡೆಯಬೇಕು. ಅಲ್ಲಿಯವರೆಗೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬಾರದು. ಗುರುತಿನ ಚೀಟಿ / ವ್ಯಾಪಾರದ ಪ್ರಮಾಣ ಪತ್ರಗಳನ್ನು ನವೀಕರಿಸಬೇಕು. ಸಮೀಕ್ಷೆ ಕುರಿತು ಬೀದಿ ವ್ಯಾಪಾರಿಗಳ ಸಂಘಟನೆಗಳೊಂದಿಗೆ ಸಭೆ ನಡೆಸಬೇಕು ಮತ್ತು ಅವರ ಸಲಹೆ ಸೂಚನೆಗಳನ್ನು ಪಡೆಯಬೇಕು’ ಎಂದು ಬೇಡಿಕೆ ಸಲ್ಲಿಸಿದರು.</p>.<p>‘ಬೀದಿ ವ್ಯಾಪಾರ ಮಾಡುವ ಹಕ್ಕು ಸಂವಿಧಾನದಲ್ಲಿ ನಮಗೆ ನೀಡಲಾಗಿದೆ. ಬೀದಿ ವ್ಯಾಪಾರಸ್ಥರ ಹಕ್ಕುಗಳನ್ನು ರಕ್ಷಿಸಬೇಕೆಂದು ಹಲವಾರು ನ್ಯಾಯಾಲಯಗಳ ತೀರ್ಪುಗಳು ಹೇಳಿವೆ’ ಎಂದು ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್. ಬಾಬು ಹೇಳಿದರು.</p>.<p>‘ಬೀದಿ ವ್ಯಾಪಾರಿಗಳನ್ನು ರಕ್ಷಿಸುವ ಕಾನೂನನ್ನು ಬಿಬಿಎಂಪಿ ಬಹಿರಂಗವಾಗಿ ಉಲ್ಲಂಘಿಸಿ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ’ ಎಂದು ಸಂಘದ ಕಾರ್ಯದರ್ಶಿ ಪಿ.ಪಿ. ಅಪ್ಪಣ್ಣ ದೂರಿದರು.</p>.<p>ಬೀದಿ ವ್ಯಾಪಾರಿಗಳಿಗೆ ನೀಡಿರುವ ಗುರುತಿನ ಚೀಟಿ, ವ್ಯಾಪಾರದ ಪ್ರಮಾಣಪತ್ರವನ್ನು ನವೀಕರಿಸಬೇಕು ಎಂದು ಸಂಘದ ಉಪಾಧ್ಯಕ್ಷೆ ಶಶಿಕಲಾ ಆಗ್ರಹಿಸಿದರು.</p>.<p>‘ನಾವು ಬೀದಿ ಬದಿಗಳಲ್ಲಿ ವ್ಯಾಪಾರ ಮಾಡದಿದ್ದರೆ ಮಧ್ಯಮವರ್ಗದವರು ಮಾಲ್, ಮಾರ್ಟ್ಗಳಿಗೆ ಹೋಗಿ ವಸ್ತುಗಳನ್ನು ಖರೀದಿಸಲು ಸಾಧ್ಯವಾಗುವುದಿಲ್ಲ’ ಎಂದು ಸಂಘದ ಜಂಟಿ ಕಾರ್ಯದರ್ಶಿ ಸಯ್ಯದ್ ಝಮೀರ್ ಹೇಳಿದರು.</p>.<p>‘ಬಿಬಿಎಂಪಿ ಮುಖ್ಯ ಆಯುಕ್ತರೊಂದಿಗೆ ಸಭೆ ನಡೆಸಿ, ನಿಮ್ಮ ಬೇಡಿಕೆಗಳನ್ನು ಚರ್ಚಿಸಲಾಗುವುದು’ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರೆಡ್ಡಿ ಶಂಕರಬಾಬು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>