<p><strong>ಬೆಂಗಳೂರು</strong>: ಬೌದ್ಧರ ಪವಿತ್ರ ಸ್ಥಳ, ಬಿಹಾರದ ಬೋಧಗಯಾ ಮಹಾಬೋಧಿ, ಮಹಾವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ನೀಡಬೇಕು ಎಂದು ಆಗ್ರಹಿಸಿ ಮಂಗಳವಾರ ಉಪಾಸಿಕ ಮತ್ತು ಉಪಾಸಕ ಚಾರಿಟೇಬಲ್ ಟ್ರಸ್ಟ್ ಹಾಗೂ ಬೋಧಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿತ್ತು.</p>.<p>ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೋಧಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನದ ರಾಜ್ಯ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷ ಬಂತೆ ಬೋಧಿದತ್ತ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ಬೌದ್ಧ ಬಿಕ್ಕುಗಳು ಹಾಗೂ ಭೀಮ್ ಪ್ರಜಾ ಸಂಘದವರು ಭಾಗವಹಿಸಿದ್ದರು.</p>.<p>ಬಂತೆ ಬೋಧಿದತ್ತ ಮಾತನಾಡಿ, ‘ಮಹಾಬೋಧಿ, ಮಹಾವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ಧರಿಗೆ ನೀಡದೆ ಅನ್ಯಾಯ ಮಾಡಲಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ನಡೆದ ಈ ಹೋರಾಟಕ್ಕೆ ಇನ್ನೂ ಜಯ ಸಿಕ್ಕಿಲ್ಲ. ಸಂವಿಧಾನದ ಕಲಂ 13, 25,26, ಮತ್ತು 29 ರ ರಕ್ಷಣೆ ಮತ್ತು ಅನುಷ್ಠಾನಕ್ಕಾಗಿ ಬಿ.ಟಿ.ಕಾಯ್ದೆ 1949 ರದ್ದುಗೊಳಿಸಿ ಬುದ್ಧ ಗಯಾದ ಮಹಾಬೋಧಿ, ಮಹಾವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ಧರಿಗೆ ಒಪ್ಪಿಸಬೇಕು. ದೇಶದ ಬಿಕ್ಕು ಮಹಾಸಂಘ ಫೆ.12 ರಂದು 'ದೆಹಲಿ ಚಲೋ ಮಿಷನ್ ಮಹಾಬೋಧಿ ಮಹಾವಿಹಾರ ಮುಕ್ತಿಗಾಗಿ' ದೇಶಾದ್ಯಾಂತ ಕರೆಕೊಟ್ಟಿದ್ದಾರೆ. ಆ ನಿಮಿತ್ತ ಅಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಹಸ್ರಾರು ಮಂದಿ ಭಾಗಿಯಾಗಲಿದ್ದಾರೆ’ ಎಂದು ತಿಳಿಸಿದರು.</p>.<p> ಸಮಿತಿಯ ಭಂತೆ ವರಜ್ಯೋತಿ ಥೇರಾ, ಭಂತೆ ವಿನಯ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೌದ್ಧರ ಪವಿತ್ರ ಸ್ಥಳ, ಬಿಹಾರದ ಬೋಧಗಯಾ ಮಹಾಬೋಧಿ, ಮಹಾವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ನೀಡಬೇಕು ಎಂದು ಆಗ್ರಹಿಸಿ ಮಂಗಳವಾರ ಉಪಾಸಿಕ ಮತ್ತು ಉಪಾಸಕ ಚಾರಿಟೇಬಲ್ ಟ್ರಸ್ಟ್ ಹಾಗೂ ಬೋಧಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿತ್ತು.</p>.<p>ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೋಧಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನದ ರಾಜ್ಯ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷ ಬಂತೆ ಬೋಧಿದತ್ತ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ಬೌದ್ಧ ಬಿಕ್ಕುಗಳು ಹಾಗೂ ಭೀಮ್ ಪ್ರಜಾ ಸಂಘದವರು ಭಾಗವಹಿಸಿದ್ದರು.</p>.<p>ಬಂತೆ ಬೋಧಿದತ್ತ ಮಾತನಾಡಿ, ‘ಮಹಾಬೋಧಿ, ಮಹಾವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ಧರಿಗೆ ನೀಡದೆ ಅನ್ಯಾಯ ಮಾಡಲಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ನಡೆದ ಈ ಹೋರಾಟಕ್ಕೆ ಇನ್ನೂ ಜಯ ಸಿಕ್ಕಿಲ್ಲ. ಸಂವಿಧಾನದ ಕಲಂ 13, 25,26, ಮತ್ತು 29 ರ ರಕ್ಷಣೆ ಮತ್ತು ಅನುಷ್ಠಾನಕ್ಕಾಗಿ ಬಿ.ಟಿ.ಕಾಯ್ದೆ 1949 ರದ್ದುಗೊಳಿಸಿ ಬುದ್ಧ ಗಯಾದ ಮಹಾಬೋಧಿ, ಮಹಾವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ಧರಿಗೆ ಒಪ್ಪಿಸಬೇಕು. ದೇಶದ ಬಿಕ್ಕು ಮಹಾಸಂಘ ಫೆ.12 ರಂದು 'ದೆಹಲಿ ಚಲೋ ಮಿಷನ್ ಮಹಾಬೋಧಿ ಮಹಾವಿಹಾರ ಮುಕ್ತಿಗಾಗಿ' ದೇಶಾದ್ಯಾಂತ ಕರೆಕೊಟ್ಟಿದ್ದಾರೆ. ಆ ನಿಮಿತ್ತ ಅಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಹಸ್ರಾರು ಮಂದಿ ಭಾಗಿಯಾಗಲಿದ್ದಾರೆ’ ಎಂದು ತಿಳಿಸಿದರು.</p>.<p> ಸಮಿತಿಯ ಭಂತೆ ವರಜ್ಯೋತಿ ಥೇರಾ, ಭಂತೆ ವಿನಯ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>