<p><strong>ಬೆಂಗಳೂರು</strong>: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಆಗಸ್ಟ್ 27ರಂದು ನಡೆಸಲಿರುವ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.</p>.<p>ವಿವಿಧ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ಸರ್ಕಾರ ಹಾಗೂ ಕೆಪಿಎಸ್ಸಿ ವಿರುದ್ಧ ಆಕ್ರೋಶ ಹೊರಹಾಕಿ ಘೋಷಣೆ ಕೂಗಿದರು. ಹಲವು ವರ್ಷಗಳಿಂದ ಕಷ್ಟಪಟ್ಟು ಅಭ್ಯಾಸ ನಡೆಸಿದ್ದವರನ್ನು ಸರ್ಕಾರವೇ ನಿರುದ್ಯೋಗಿಗಳನ್ನಾಗಿ ಮಾಡಲು ಮುಂದಾಗಿದೆ ಎಂದು ಆಕ್ರೋಶ ಹೊರಹಾಕಿದರು. ಶೂ ಪಾಲಿಶ್ ಮಾಡಿ ಪ್ರತಿಭಟಿಸಿದರು.</p>.<p>‘ಎಲ್ಲ ವರ್ಗದವರಿಗೂ ಅನುಕೂಲ ಆಗಲಿ ಎಂಬ ಕಾರಣಕ್ಕೆ ಭಾನುವಾರ ಪರೀಕ್ಷೆ ನಡೆಸಬೇಕು. ಆದರೆ, ವಾರದ ಮಧ್ಯದಲ್ಲಿ ಪರೀಕ್ಷೆ ನಡೆಸಿ ಅವಕಾಶ ವಂಚಿತರನ್ನಾಗಿ ಮಾಡಲಾಗುತ್ತಿದೆ’ ಎಂದು ನೋವು ತೋಡಿಕೊಂಡರು.</p>.<p>ಆಗಸ್ಟ್ 27ರಂದು ಯುಜಿಸಿಯ ನೆಟ್ ಪರೀಕ್ಷೆಯೂ ನಡೆಯುತ್ತಿದೆ. ಅಂದೇ ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದೆ. ಎರಡೂ ಪರೀಕ್ಷೆ ತೆಗೆದುಕೊಂಡವರು, ಯಾವುದಾದರೂ ಒಂದು ಪರೀಕ್ಷೆಯಿಂದ ವಂಚಿತರಾಗಬೇಕಿದೆ. ಆದ್ದರಿಂದ, ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿದರು.</p>.<p>‘ಮಂಗಳವಾರ ಕೇಂದ್ರ ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳ ನೌಕರರಿಗೆ ರಜೆ ಸಿಗುವುದಿಲ್ಲ. ಅಲ್ಲದೇ ಪರೀಕ್ಷಾ ಕೇಂದ್ರಗಳೂ 400 ಕಿ.ಮೀ ದೂರದಲ್ಲಿವೆ. ಆ ಸ್ಥಳಕ್ಕೆ ತಲುಪುವುದೂ ಕಷ್ಟವಾಗಿದೆ’ ಎಂದು ಹೇಳಿದರು.</p>.<p>‘2017–18ನೇ ಬ್ಯಾಚ್ನ ಅಭ್ಯರ್ಥಿಗಳಿಗೂ ಅವಕಾಶ ನೀಡಲಾಗಿದೆ. ಆದರೆ, ಅಭ್ಯಾಸಕ್ಕೆ ಸಮಯ ಇಲ್ಲ’ ಎಂದು ಆಕಾಂಕ್ಷಿಗಳು ಹೇಳಿದರು.</p>.<div><blockquote>ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲು ಸಾಧ್ಯವಿಲ್ಲ. ಕೃಷ್ಣ ಜನ್ಮಾಷ್ಟಮಿಯಂದು ನಿಗದಿಯಾಗಿದ್ದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ </blockquote><span class="attribution">ಸಿದ್ದರಾಮಯ್ಯ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಆಗಸ್ಟ್ 27ರಂದು ನಡೆಸಲಿರುವ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.</p>.<p>ವಿವಿಧ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ಸರ್ಕಾರ ಹಾಗೂ ಕೆಪಿಎಸ್ಸಿ ವಿರುದ್ಧ ಆಕ್ರೋಶ ಹೊರಹಾಕಿ ಘೋಷಣೆ ಕೂಗಿದರು. ಹಲವು ವರ್ಷಗಳಿಂದ ಕಷ್ಟಪಟ್ಟು ಅಭ್ಯಾಸ ನಡೆಸಿದ್ದವರನ್ನು ಸರ್ಕಾರವೇ ನಿರುದ್ಯೋಗಿಗಳನ್ನಾಗಿ ಮಾಡಲು ಮುಂದಾಗಿದೆ ಎಂದು ಆಕ್ರೋಶ ಹೊರಹಾಕಿದರು. ಶೂ ಪಾಲಿಶ್ ಮಾಡಿ ಪ್ರತಿಭಟಿಸಿದರು.</p>.<p>‘ಎಲ್ಲ ವರ್ಗದವರಿಗೂ ಅನುಕೂಲ ಆಗಲಿ ಎಂಬ ಕಾರಣಕ್ಕೆ ಭಾನುವಾರ ಪರೀಕ್ಷೆ ನಡೆಸಬೇಕು. ಆದರೆ, ವಾರದ ಮಧ್ಯದಲ್ಲಿ ಪರೀಕ್ಷೆ ನಡೆಸಿ ಅವಕಾಶ ವಂಚಿತರನ್ನಾಗಿ ಮಾಡಲಾಗುತ್ತಿದೆ’ ಎಂದು ನೋವು ತೋಡಿಕೊಂಡರು.</p>.<p>ಆಗಸ್ಟ್ 27ರಂದು ಯುಜಿಸಿಯ ನೆಟ್ ಪರೀಕ್ಷೆಯೂ ನಡೆಯುತ್ತಿದೆ. ಅಂದೇ ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದೆ. ಎರಡೂ ಪರೀಕ್ಷೆ ತೆಗೆದುಕೊಂಡವರು, ಯಾವುದಾದರೂ ಒಂದು ಪರೀಕ್ಷೆಯಿಂದ ವಂಚಿತರಾಗಬೇಕಿದೆ. ಆದ್ದರಿಂದ, ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿದರು.</p>.<p>‘ಮಂಗಳವಾರ ಕೇಂದ್ರ ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳ ನೌಕರರಿಗೆ ರಜೆ ಸಿಗುವುದಿಲ್ಲ. ಅಲ್ಲದೇ ಪರೀಕ್ಷಾ ಕೇಂದ್ರಗಳೂ 400 ಕಿ.ಮೀ ದೂರದಲ್ಲಿವೆ. ಆ ಸ್ಥಳಕ್ಕೆ ತಲುಪುವುದೂ ಕಷ್ಟವಾಗಿದೆ’ ಎಂದು ಹೇಳಿದರು.</p>.<p>‘2017–18ನೇ ಬ್ಯಾಚ್ನ ಅಭ್ಯರ್ಥಿಗಳಿಗೂ ಅವಕಾಶ ನೀಡಲಾಗಿದೆ. ಆದರೆ, ಅಭ್ಯಾಸಕ್ಕೆ ಸಮಯ ಇಲ್ಲ’ ಎಂದು ಆಕಾಂಕ್ಷಿಗಳು ಹೇಳಿದರು.</p>.<div><blockquote>ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲು ಸಾಧ್ಯವಿಲ್ಲ. ಕೃಷ್ಣ ಜನ್ಮಾಷ್ಟಮಿಯಂದು ನಿಗದಿಯಾಗಿದ್ದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ </blockquote><span class="attribution">ಸಿದ್ದರಾಮಯ್ಯ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>