<p><strong>ಕೆ.ಆರ್.ಪುರ</strong>: ಕಾಡುಗೋಡಿ ವಾರ್ಡಿನ ಸಿದ್ಧಾರ್ಥ ಬಡಾವಣೆಗೆ ಕುಡಿಯುವ ನೀರು, ಚರಂಡಿ, ಶೌಚಾಲಯ, ಸಾರ್ವಜನಿಕ ರಸ್ತೆ ಒದಗಿಸುವಂತೆ ಬಡಾವಣೆಯ ನಿವಾಸಿಗಳು ಹಾಗೂ ಕರ್ನಾಟಕ ದಲಿತ ಕ್ರಿಯಾ ವೇದಿಕೆ ಸಂಘಟನೆಯ ಕಾರ್ಯಕರ್ತರು ಕಾಡುಗೋಡಿ ಬಿಬಿಎಂಪಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟಿಸಿದರು.</p>.<p>‘ಸಿದ್ದಾರ್ಥ ಬಡಾವಣೆಯಲ್ಲಿ 1500ಕ್ಕೂ ಹೆಚ್ಚು ವಸತಿ ಕಟ್ಟಡಗಳಿದ್ದು, 4 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಬಡಾವಣೆಗೆ ರಸ್ತೆಯಿಲ್ಲ. ಬಡಾವಣೆ ಪಕ್ಕದಲ್ಲಿನ ರೈಲ್ವೆ ಕೆಳ ಸೇತುವೆಯ ಮೂಲಕವೇ ಇತರ ಮಾರ್ಗಗಳಿಗೆ ತೆರಳಬೇಕು. ಈ ಸಂದರ್ಭದಲ್ಲಿ ರೈಲ್ವೆ ಅಪಘಾತಗಳಾಗಿ ತೊಂದರೆ ಅನುಭವಿಸುವಂತಾಗಿದೆ. ಮೂಲಸೌಕರ್ಯಗಳು ಬಡಾವಣೆಗೆ ಕನಸಿನ ಮಾತಾಗಿದೆ’ ಎಂದು ನಿವಾಸಿಗಳು ದೂರಿದರು.</p>.<p>‘ಕುಡಿಯುವ ನೀರಿಲ್ಲದೆ ನಿತ್ಯ ನರಕಯಾತನೆ ಅನುಭವಿಸಲಾಗುತ್ತಿದೆ. ಮೂಲಸೌಕರ್ಯ ಒದಗಿಸಲು ಬಿಬಿಎಂಪಿಗೆ ಹಲವಾರು ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಇನ್ನೂ ಕ್ರಮ ಕೈಗೊಳ್ಳದಿದ್ದರೆ, ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಕರ್ನಾಟಕ ದಲಿತ ಕ್ರಿಯಾ ವೇದಿಕೆ ಕಾರ್ಯಾಧ್ಯಕ್ಷ ಕಾಡುಗೋಡಿ ಸೊಣ್ಣಪ್ಪ ಹೇಳಿದರು.</p>.<p>‘ಸಂಸದರು, ಸ್ಥಳೀಯ ಶಾಸಕ ಹಾಗೂ ಅಧಿಕಾರಿಗಳಿಗೆ ಮೂಲಸೌಕರ್ಯ ಒದಗಿಸಲು ಹಲವಾರು ಬಾರಿ ಮನವಿ ಮಾಡಲಾಗಿದೆ. ಅವರೂ ಕ್ರಮ ಕೈಗೊಂಡಿಲ್ಲ’ ಎಂದು ಡಿಎಸ್ಎಸ್ ಭೀಮ ಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ಹೆಬ್ಬಾಳ ವೆಂಕಟೇಶ್ ದೂರಿದರು.</p>.<p>‘ಮುಂದೆ ಬರುವ ಚುನಾವಣೆಯಲ್ಲಿ ಮತದಾನ ಮಾಡದೆ ಎಲ್ಲ ಚುನಾವಣೆಗಳನ್ನು ಬಹಿಷ್ಕಾರ ಮಾಡಲಾಗುತ್ತದೆ’ ಎಂದು ಕೆ.ಆರ್.ಎಸ್. ಕಾರ್ಮಿಕ ಘಟಕ ರಾಜ್ಯಾಧ್ಯಕ್ಷ ಬೆಳತೂರು ವೆಂಕಟೇಶ್ ಎಚ್ಚರಿಕೆ ನೀಡಿದರು.</p>.<p>ಪ್ರಗತಿಪರ ಸಂಘಟನೆಗಳ ಮುಖಂಡರಾದ ಕೆ.ವೆಂಕಟೇಶ್, ಸಿ.ಮುನಿಯಪ್ಪ, ಎಸ್.ಕೆ.ವೆಂಕಟೇಶ್, ಕ್ರಿಸ್ತುರಾಜ್, ಮಧು ವಲಿಯರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ</strong>: ಕಾಡುಗೋಡಿ ವಾರ್ಡಿನ ಸಿದ್ಧಾರ್ಥ ಬಡಾವಣೆಗೆ ಕುಡಿಯುವ ನೀರು, ಚರಂಡಿ, ಶೌಚಾಲಯ, ಸಾರ್ವಜನಿಕ ರಸ್ತೆ ಒದಗಿಸುವಂತೆ ಬಡಾವಣೆಯ ನಿವಾಸಿಗಳು ಹಾಗೂ ಕರ್ನಾಟಕ ದಲಿತ ಕ್ರಿಯಾ ವೇದಿಕೆ ಸಂಘಟನೆಯ ಕಾರ್ಯಕರ್ತರು ಕಾಡುಗೋಡಿ ಬಿಬಿಎಂಪಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟಿಸಿದರು.</p>.<p>‘ಸಿದ್ದಾರ್ಥ ಬಡಾವಣೆಯಲ್ಲಿ 1500ಕ್ಕೂ ಹೆಚ್ಚು ವಸತಿ ಕಟ್ಟಡಗಳಿದ್ದು, 4 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಬಡಾವಣೆಗೆ ರಸ್ತೆಯಿಲ್ಲ. ಬಡಾವಣೆ ಪಕ್ಕದಲ್ಲಿನ ರೈಲ್ವೆ ಕೆಳ ಸೇತುವೆಯ ಮೂಲಕವೇ ಇತರ ಮಾರ್ಗಗಳಿಗೆ ತೆರಳಬೇಕು. ಈ ಸಂದರ್ಭದಲ್ಲಿ ರೈಲ್ವೆ ಅಪಘಾತಗಳಾಗಿ ತೊಂದರೆ ಅನುಭವಿಸುವಂತಾಗಿದೆ. ಮೂಲಸೌಕರ್ಯಗಳು ಬಡಾವಣೆಗೆ ಕನಸಿನ ಮಾತಾಗಿದೆ’ ಎಂದು ನಿವಾಸಿಗಳು ದೂರಿದರು.</p>.<p>‘ಕುಡಿಯುವ ನೀರಿಲ್ಲದೆ ನಿತ್ಯ ನರಕಯಾತನೆ ಅನುಭವಿಸಲಾಗುತ್ತಿದೆ. ಮೂಲಸೌಕರ್ಯ ಒದಗಿಸಲು ಬಿಬಿಎಂಪಿಗೆ ಹಲವಾರು ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಇನ್ನೂ ಕ್ರಮ ಕೈಗೊಳ್ಳದಿದ್ದರೆ, ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಕರ್ನಾಟಕ ದಲಿತ ಕ್ರಿಯಾ ವೇದಿಕೆ ಕಾರ್ಯಾಧ್ಯಕ್ಷ ಕಾಡುಗೋಡಿ ಸೊಣ್ಣಪ್ಪ ಹೇಳಿದರು.</p>.<p>‘ಸಂಸದರು, ಸ್ಥಳೀಯ ಶಾಸಕ ಹಾಗೂ ಅಧಿಕಾರಿಗಳಿಗೆ ಮೂಲಸೌಕರ್ಯ ಒದಗಿಸಲು ಹಲವಾರು ಬಾರಿ ಮನವಿ ಮಾಡಲಾಗಿದೆ. ಅವರೂ ಕ್ರಮ ಕೈಗೊಂಡಿಲ್ಲ’ ಎಂದು ಡಿಎಸ್ಎಸ್ ಭೀಮ ಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ಹೆಬ್ಬಾಳ ವೆಂಕಟೇಶ್ ದೂರಿದರು.</p>.<p>‘ಮುಂದೆ ಬರುವ ಚುನಾವಣೆಯಲ್ಲಿ ಮತದಾನ ಮಾಡದೆ ಎಲ್ಲ ಚುನಾವಣೆಗಳನ್ನು ಬಹಿಷ್ಕಾರ ಮಾಡಲಾಗುತ್ತದೆ’ ಎಂದು ಕೆ.ಆರ್.ಎಸ್. ಕಾರ್ಮಿಕ ಘಟಕ ರಾಜ್ಯಾಧ್ಯಕ್ಷ ಬೆಳತೂರು ವೆಂಕಟೇಶ್ ಎಚ್ಚರಿಕೆ ನೀಡಿದರು.</p>.<p>ಪ್ರಗತಿಪರ ಸಂಘಟನೆಗಳ ಮುಖಂಡರಾದ ಕೆ.ವೆಂಕಟೇಶ್, ಸಿ.ಮುನಿಯಪ್ಪ, ಎಸ್.ಕೆ.ವೆಂಕಟೇಶ್, ಕ್ರಿಸ್ತುರಾಜ್, ಮಧು ವಲಿಯರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>