ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಡಿನೋಟಿಫೈ ಮಾಡಿರುವ ಆರೋಪದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಚಿವ ಮುರುಗೇಶ ಆರ್. ನಿರಾಣಿ ವಿರುದ್ಧ ವಿಚಾರಣೆಹೈಕೋರ್ಟ್ ಅನುಮತಿ ನೀಡಿದ್ದು, ಈ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಕರಣ ದೂರುದಾರ ಉದ್ಯಮಿ ಆಲಂ ಪಾಷಾ ಒತ್ತಾಯಿಸಿದ್ದಾರೆ.