<p><strong>ಬೆಂಗಳೂರು:</strong> ವಿಧಾನಸಭೆ ಕಾರ್ಯದರ್ಶಿ ಹುದ್ದೆಯನ್ನು ಎಸ್. ಮೂರ್ತಿ ಅವರಿಗೆ ವಾಪಸ್ ನೀಡಬೇಕು ಎಂದು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಒತ್ತಾಯಿಸಿದೆ.</p>.<p>ಸುಳ್ಳು ಆರೋಪ ಹೊರಿಸಿ ಎಸ್. ಮೂರ್ತಿ ಅವರಿಂದ ವಿಧಾನಸಭೆ ಕಾರ್ಯದರ್ಶಿ ಹುದ್ದೆ ಕಸಿದುಕೊಳ್ಳಲಾಗಿದೆ. ಹೈಕೋರ್ಟ್ನ ಆದೇಶದ ಬಳಿಕವೂ ಅವರಿಗೆ ಕಾರ್ಯದರ್ಶಿ ಹುದ್ದೆ ನೀಡಿಲ್ಲ. ಕೂಡಲೇ ಅನ್ಯಾಯ ಸರಿಪಡಿಸಬೇಕು ಎಂದು ಒಕ್ಕೂಟವು ಸರ್ಕಾರವನ್ನು ಒತ್ತಾಯಿಸಿದೆ.</p>.<p>ಕರ್ತವ್ಯ ಲೋಪದ ಆರೋಪ ಹೊರಿಸಿ ಮೂರ್ತಿ ಅವರನ್ನು ಅಮಾನತು ಮಾಡಲಾಗಿತ್ತು. ಎಸ್. ಮೂರ್ತಿ ಅವರು ಅದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಅವರನ್ನು ಮರು ನೇಮಕ ಮಾಡಿಕೊಳ್ಳುವಂತೆ ಹೈಕೋರ್ಟ್ 2020ರ ಜುಲೈ 2ರಂದು ಆದೇಶ ನೀಡಿತ್ತು. ಆದರೆ, ಈ ಆದೇಶ ಜಾರಿ ಮಾಡುವ ಬದಲು ಆಗಿನ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾರ್ಯದರ್ಶಿ ಹುದ್ದೆಯಿಂದ 3 ದರ್ಜೆ ಕೆಳಹಂತದ ಅಧೀನ ಕಾರ್ಯದರ್ಶಿ ಹುದ್ದೆಗೆ ಹಿಂಬಡ್ತಿಗೊಳಿಸಿ, ದಂಡನೆಗಳನ್ನು ವಿಧಿಸಿ ನೇಮಕ ಮಾಡಿದ್ದರು. ಈ ಅನ್ಯಾಯ ಸರಿಮಾಡಬೇಕು ಎಂದು ಆಗ್ರಹಿಸಿದೆ.</p>.<p>ಈ ಬಗ್ಗೆ ಒಕ್ಕೂಟದ ಸಂಚಾಲಕರಾದ ಜ್ಞಾನಪ್ರಕಾಶ ಸ್ವಾಮೀಜಿ, ಬಿ. ಗೋಪಾಲ್ ಅವರು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಸಭಾಪತಿ ಬಿ.ಎಸ್. ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸಭೆ ಕಾರ್ಯದರ್ಶಿ ಹುದ್ದೆಯನ್ನು ಎಸ್. ಮೂರ್ತಿ ಅವರಿಗೆ ವಾಪಸ್ ನೀಡಬೇಕು ಎಂದು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಒತ್ತಾಯಿಸಿದೆ.</p>.<p>ಸುಳ್ಳು ಆರೋಪ ಹೊರಿಸಿ ಎಸ್. ಮೂರ್ತಿ ಅವರಿಂದ ವಿಧಾನಸಭೆ ಕಾರ್ಯದರ್ಶಿ ಹುದ್ದೆ ಕಸಿದುಕೊಳ್ಳಲಾಗಿದೆ. ಹೈಕೋರ್ಟ್ನ ಆದೇಶದ ಬಳಿಕವೂ ಅವರಿಗೆ ಕಾರ್ಯದರ್ಶಿ ಹುದ್ದೆ ನೀಡಿಲ್ಲ. ಕೂಡಲೇ ಅನ್ಯಾಯ ಸರಿಪಡಿಸಬೇಕು ಎಂದು ಒಕ್ಕೂಟವು ಸರ್ಕಾರವನ್ನು ಒತ್ತಾಯಿಸಿದೆ.</p>.<p>ಕರ್ತವ್ಯ ಲೋಪದ ಆರೋಪ ಹೊರಿಸಿ ಮೂರ್ತಿ ಅವರನ್ನು ಅಮಾನತು ಮಾಡಲಾಗಿತ್ತು. ಎಸ್. ಮೂರ್ತಿ ಅವರು ಅದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಅವರನ್ನು ಮರು ನೇಮಕ ಮಾಡಿಕೊಳ್ಳುವಂತೆ ಹೈಕೋರ್ಟ್ 2020ರ ಜುಲೈ 2ರಂದು ಆದೇಶ ನೀಡಿತ್ತು. ಆದರೆ, ಈ ಆದೇಶ ಜಾರಿ ಮಾಡುವ ಬದಲು ಆಗಿನ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾರ್ಯದರ್ಶಿ ಹುದ್ದೆಯಿಂದ 3 ದರ್ಜೆ ಕೆಳಹಂತದ ಅಧೀನ ಕಾರ್ಯದರ್ಶಿ ಹುದ್ದೆಗೆ ಹಿಂಬಡ್ತಿಗೊಳಿಸಿ, ದಂಡನೆಗಳನ್ನು ವಿಧಿಸಿ ನೇಮಕ ಮಾಡಿದ್ದರು. ಈ ಅನ್ಯಾಯ ಸರಿಮಾಡಬೇಕು ಎಂದು ಆಗ್ರಹಿಸಿದೆ.</p>.<p>ಈ ಬಗ್ಗೆ ಒಕ್ಕೂಟದ ಸಂಚಾಲಕರಾದ ಜ್ಞಾನಪ್ರಕಾಶ ಸ್ವಾಮೀಜಿ, ಬಿ. ಗೋಪಾಲ್ ಅವರು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಸಭಾಪತಿ ಬಿ.ಎಸ್. ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>