‘ಈ ಯೋಜನೆಯ ಅಡಿಯಲ್ಲಿ 2008ರಿಂದ ಇದುವರೆಗೂ ರಾಜ್ಯದಾದ್ಯಂತ 3000ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನೂತನ ಟೆಂಡರ್ ಪ್ರಕ್ರಿಯೆಯಲ್ಲಿ ಸೇವಾ ಹಿರಿತನವನ್ನು ಪರಿಗಣಿಸಿ, ಸದ್ಯ ನೀಡುತ್ತಿರುವ ವೇತನದಲ್ಲಿ ಯಾವುದೇ ರೀತಿಯ ಬದಲಾವಣೆಯಾಗದಂತೆ ಹೆಚ್ಚುವರಿ ವೇತನ ನೀಡಬೇಕು. ಕಾರ್ಮಿಕ ಕಾಯ್ದೆ ಅಡಿಯಲ್ಲಿ ಬರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ ಸುಧಾಕರ ಅವರಿಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ’ ಎಂದರು.