<p><strong>ಬೆಂಗಳೂರು</strong>: ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ವಾರ್ಷಿಕ ₹200 ಕೋಟಿ ಅನುದಾನ ಒದಗಿಸಬೇಕು ಎಂದು ಸಾಮಾಜಿಕ ನ್ಯಾಯಕ್ಕಾಗಿ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರ ಮೈತ್ರಿಕೂಟ ಆಗ್ರಹಿಸಿದೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೈತ್ರಿಕೂಟದ ಸದಸ್ಯರಾದ ರೂಮಿ ಹರೀಶ್, ಸವಿತಾ, ಉಮಾ, ಸನಾ ಸುಮನ್, ‘ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಅಭಿವೃದ್ಧಿಗೆ ಸಂವಿಧಾನದ ಅಡಿಯಲ್ಲಿ ನೀಡಿರುವ ಆಶೋತ್ತರಗಳನ್ನು ಈಡೇರಿಸಲು ಮಂಡಳಿ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕೇಂದ್ರ ಸರ್ಕಾರವು ಏಪ್ರಿಲ್ 15 ಅನ್ನು ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ದಿನವೆಂದು ಘೋಷಿಸಬೇಕು. ರಾಜ್ಯ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳ ಅನುಕೂಲವು ಲಿಂಗತ್ವ ಅಲ್ಪಸಂಖ್ಯಾತರಿಗೂ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರ ನೀತಿ–2017 ಅನುಷ್ಠಾನಗೊಳಿಸಬೇಕು. ಈ ಸಮುದಾಯದ ಜನಗಣತಿ ನಡೆಸಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಜೀವ, ಜನಸೇವಾ ಸಮಿತಿ, ಕರ್ನಾಟಕ ಮಂಗಳಮುಖಿಯರ ಸಂಘ, ಒಂದೆಡೆ, ಪಯಣ, ಪರಿವರ್ತನ ಟ್ರಸ್ಟ್ನ ಸಹಭಾಗಿತ್ವದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಲಿಂಗತ್ವ ಮತ್ತು ಅಲ್ಪಸಂಖ್ಯಾತರ ಮೈತ್ರಿಕೂಟವನ್ನು ಸ್ಥಾಪಿಸಲಾಗಿದೆ. ಈ ಮೈತ್ರಿಕೂಟವು ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಹಾಗೂ ತಾರತಮ್ಯ ನೀತಿಯ ವಿರುದ್ಧ ಹೋರಾಡಲಿದೆ. ಸಾಮಾಜಿಕ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ವಾರ್ಷಿಕ ₹200 ಕೋಟಿ ಅನುದಾನ ಒದಗಿಸಬೇಕು ಎಂದು ಸಾಮಾಜಿಕ ನ್ಯಾಯಕ್ಕಾಗಿ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರ ಮೈತ್ರಿಕೂಟ ಆಗ್ರಹಿಸಿದೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೈತ್ರಿಕೂಟದ ಸದಸ್ಯರಾದ ರೂಮಿ ಹರೀಶ್, ಸವಿತಾ, ಉಮಾ, ಸನಾ ಸುಮನ್, ‘ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಅಭಿವೃದ್ಧಿಗೆ ಸಂವಿಧಾನದ ಅಡಿಯಲ್ಲಿ ನೀಡಿರುವ ಆಶೋತ್ತರಗಳನ್ನು ಈಡೇರಿಸಲು ಮಂಡಳಿ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕೇಂದ್ರ ಸರ್ಕಾರವು ಏಪ್ರಿಲ್ 15 ಅನ್ನು ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ದಿನವೆಂದು ಘೋಷಿಸಬೇಕು. ರಾಜ್ಯ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳ ಅನುಕೂಲವು ಲಿಂಗತ್ವ ಅಲ್ಪಸಂಖ್ಯಾತರಿಗೂ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರ ನೀತಿ–2017 ಅನುಷ್ಠಾನಗೊಳಿಸಬೇಕು. ಈ ಸಮುದಾಯದ ಜನಗಣತಿ ನಡೆಸಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಜೀವ, ಜನಸೇವಾ ಸಮಿತಿ, ಕರ್ನಾಟಕ ಮಂಗಳಮುಖಿಯರ ಸಂಘ, ಒಂದೆಡೆ, ಪಯಣ, ಪರಿವರ್ತನ ಟ್ರಸ್ಟ್ನ ಸಹಭಾಗಿತ್ವದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಲಿಂಗತ್ವ ಮತ್ತು ಅಲ್ಪಸಂಖ್ಯಾತರ ಮೈತ್ರಿಕೂಟವನ್ನು ಸ್ಥಾಪಿಸಲಾಗಿದೆ. ಈ ಮೈತ್ರಿಕೂಟವು ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಹಾಗೂ ತಾರತಮ್ಯ ನೀತಿಯ ವಿರುದ್ಧ ಹೋರಾಡಲಿದೆ. ಸಾಮಾಜಿಕ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>