ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, ‘ಕೋವಿಡ್ ಕಾಲದಲ್ಲಿ ಹಲವು ಆಶಾ ಕಾರ್ಯಕರ್ತೆಯರು ಹಾಗೂ ಅವರ ಕುಟುಂಬಕ್ಕೆ ಸೋಂಕು ತಗುಲಿದೆ. ಅವರಿಗೆಲ್ಲ ಚಿಕಿತ್ಸೆ ಸಿಗುವುದೇ ದುಸ್ತರವಾಯಿತು. ಕೆಲವರು ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟರು. ಅಂಥವರ ಕುಟುಂಬಗಳು ಇಂದು ಬೀದಿಗೆ ಬಿದ್ದಿವೆ. ಮೃತರ ಕುಟುಂಬಗಳಿಗೆ ಸರ್ಕಾರ ಘೋಷಿಸಿದ್ಧ ₹ 50 ಲಕ್ಷ ಇದುವರೆಗೂ ಬಂದಿಲ್ಲ’ ಎಂದರು.