‘ಸ್ವಾತಂತ್ರ್ಯೋತ್ತರ ಭಾರತದ ನಿರ್ಮಾಣದಲ್ಲಿ ದೇವರಾಜ ಅರಸು ಅವರು ಮಹತ್ವದ ಪಾತ್ರ ವಹಿಸಿದ್ದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ಜಾರಿಗೊಳಿಸಿದ ‘ಕರ್ನಾಟಕ ಭೂ ಸುಧಾರಣಾ ಕಾಯ್ದೆ–1961’ ರಾಜ್ಯದಲ್ಲಿ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವಲ್ಲಿ ಸಾಕಷ್ಟು ಪರಿಣಾಮ ಬೀರಿದೆ. ರೈತಾಪಿ ವರ್ಗದಲ್ಲಿ ಭೂ ಹಿಡುವಳಿಯ ಸ್ವರೂಪದ ಬದಲಾವಣೆಗೆ ಈ ಐತಿಹಾಸಿಕ ಕಾಯ್ದೆ ಕಾರಣವಾಗಿದೆ’ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಳಗೌಡ, ಸಾಹಿತಿ ಬರಗೂರು ರಾಮಚಂದ್ರಪ್ಪ, ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ಡಾ. ರಾಮ ಮನೋಹರ ಲೋಹಿಯಾ ಚಿಂತಕರ ವೇದಿಕೆ ಅಧ್ಯಕ್ಷ ಬಿ.ಎಸ್. ಶಿವಣ್ಣ, ವಕೀಲ ಲಕ್ಷ್ಮಿ ನಾರಾಯಣ್, ಚಿಂತಕ ಬಂಜಗೆರೆ ಜಯಪ್ರಕಾಶ್, ವಕೀಲ ಇಸ್ಮಾಯಿಲ್ ಝಬಿವುಲ್ಲಾ ಮತ್ತು ಶಿಕ್ಷಣ ತಜ್ಞ ಭೀಮಣ್ಣ ಮೇಟಿ ಪ್ರಧಾನಿಗೆ ಶನಿವಾರ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.