ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಪಡಿ ತೆರವು ಪ್ರಕರಣ: ವರದಿ ಸಲ್ಲಿಕೆಗೆ ಫೆ.3ರವರೆಗೆ ಕಾಲಾವಕಾಶ ನೀಡಿದ ಹೈಕೋರ್ಟ್‌

Last Updated 30 ಜನವರಿ 2020, 11:36 IST
ಅಕ್ಷರ ಗಾತ್ರ

ಬೆಂಗಳೂರು: ಬಾಂಗ್ಲಾ ವಲಸಿಗರೆಂಬ ಆರೋಪದಡಿ ನಗರದ ಕರಿಯಮ್ಮನ ಅಗ್ರಹಾರ, ಮಾರತ್ತಹಳ್ಳಿ, ಕಾಡುಬೀಸನಹಳ್ಳಿ, ಬೆಳ್ಳಂದೂರು ಸುತ್ತಮುತ್ತಲಿನ ಜೋಪಡಿಗಳಲ್ಲಿ ವಾಸಿಸುತ್ತಿದ್ದವರನ್ನು ಬಲವಂತವಾಗಿ ತೆರವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಪೊಲೀಸ್ ‌ಇಲಾಖೆಗೆ ಸೋಮವಾರದವರೆಗೂ (ಫೆ.3)ಹೈಕೋರ್ಟ್‌ ಕಾಲಾವಕಾಶ ನೀಡಿದೆ.

ಹಿನ್ನೆಲೆ: ಬಾಂಗ್ಲಾ ವಲಸಿಗರು ಎಂಬ ಹಣೆಪಟ್ಟಿ ಕಟ್ಟಿ ಯಾವುದೇ ಸೂಚನೆ ನೀಡದೆಜೋಪಡಿಗಳನ್ನು ಈಚೆಗೆ ನೆಲಸಮ ಮಾಡಲಾಗಿತ್ತು.

ದೇವರಬಿಸನಹಳ್ಳಿಯ ಕರಿಯಮ್ಮನ ಅಗ್ರಹಾರದ ಮಂತ್ರಿ ಇಸ್ಪನ್ ಅಪಾರ್ಟ್‌ಮೆಂಟ್ ಸಮುಚ್ಚಯಕ್ಕೆ ಹೊಂದಿಕೊಂಡಿರುವ ಖುಲ್ಲಾ ಜಾಗದಲ್ಲಿ 300ಕ್ಕೂ ಹೆಚ್ಚು ಜೋಪಡಿಗಳಿದ್ದವು. ಆ ಪೈಕಿ 80ಕ್ಕೂ ಹೆಚ್ಚು ಜೋಪಡಿಗಳನ್ನು ಕೆಡವಲಾಗಿತ್ತು.

ಬಾಂಗ್ಲಾದೇಶದ ಪ್ರಜೆಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎನ್ನಲಾದ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ಈ ತೆರವು ಮಾಡಿದ್ದಾರೆ. ‘ಸ್ಥಳೀಯರಿಗೆ ಬಾಂಗ್ಲಾ ಪ್ರಜೆಗಳ ಪಟ್ಟ ಕಟ್ಟಿ ನಡೆಸಲಾದ ತೆರವು ಅನಧಿಕೃತವಾದದ್ದು’ ಎಂಬ ಆರೋಪ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT