<p><strong>ಬೆಂಗಳೂರು: </strong>ಬಾಂಗ್ಲಾ ವಲಸಿಗರೆಂಬ ಆರೋಪದಡಿ ನಗರದ ಕರಿಯಮ್ಮನ ಅಗ್ರಹಾರ, ಮಾರತ್ತಹಳ್ಳಿ, ಕಾಡುಬೀಸನಹಳ್ಳಿ, ಬೆಳ್ಳಂದೂರು ಸುತ್ತಮುತ್ತಲಿನ ಜೋಪಡಿಗಳಲ್ಲಿ ವಾಸಿಸುತ್ತಿದ್ದವರನ್ನು ಬಲವಂತವಾಗಿ ತೆರವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಸೋಮವಾರದವರೆಗೂ (ಫೆ.3)ಹೈಕೋರ್ಟ್ ಕಾಲಾವಕಾಶ ನೀಡಿದೆ.</p>.<p><strong>ಹಿನ್ನೆಲೆ:</strong> ಬಾಂಗ್ಲಾ ವಲಸಿಗರು ಎಂಬ ಹಣೆಪಟ್ಟಿ ಕಟ್ಟಿ ಯಾವುದೇ ಸೂಚನೆ ನೀಡದೆಜೋಪಡಿಗಳನ್ನು ಈಚೆಗೆ ನೆಲಸಮ ಮಾಡಲಾಗಿತ್ತು.</p>.<p>ದೇವರಬಿಸನಹಳ್ಳಿಯ ಕರಿಯಮ್ಮನ ಅಗ್ರಹಾರದ ಮಂತ್ರಿ ಇಸ್ಪನ್ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ಹೊಂದಿಕೊಂಡಿರುವ ಖುಲ್ಲಾ ಜಾಗದಲ್ಲಿ 300ಕ್ಕೂ ಹೆಚ್ಚು ಜೋಪಡಿಗಳಿದ್ದವು. ಆ ಪೈಕಿ 80ಕ್ಕೂ ಹೆಚ್ಚು ಜೋಪಡಿಗಳನ್ನು ಕೆಡವಲಾಗಿತ್ತು.</p>.<p>ಬಾಂಗ್ಲಾದೇಶದ ಪ್ರಜೆಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎನ್ನಲಾದ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ಈ ತೆರವು ಮಾಡಿದ್ದಾರೆ. ‘ಸ್ಥಳೀಯರಿಗೆ ಬಾಂಗ್ಲಾ ಪ್ರಜೆಗಳ ಪಟ್ಟ ಕಟ್ಟಿ ನಡೆಸಲಾದ ತೆರವು ಅನಧಿಕೃತವಾದದ್ದು’ ಎಂಬ ಆರೋಪ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಾಂಗ್ಲಾ ವಲಸಿಗರೆಂಬ ಆರೋಪದಡಿ ನಗರದ ಕರಿಯಮ್ಮನ ಅಗ್ರಹಾರ, ಮಾರತ್ತಹಳ್ಳಿ, ಕಾಡುಬೀಸನಹಳ್ಳಿ, ಬೆಳ್ಳಂದೂರು ಸುತ್ತಮುತ್ತಲಿನ ಜೋಪಡಿಗಳಲ್ಲಿ ವಾಸಿಸುತ್ತಿದ್ದವರನ್ನು ಬಲವಂತವಾಗಿ ತೆರವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಸೋಮವಾರದವರೆಗೂ (ಫೆ.3)ಹೈಕೋರ್ಟ್ ಕಾಲಾವಕಾಶ ನೀಡಿದೆ.</p>.<p><strong>ಹಿನ್ನೆಲೆ:</strong> ಬಾಂಗ್ಲಾ ವಲಸಿಗರು ಎಂಬ ಹಣೆಪಟ್ಟಿ ಕಟ್ಟಿ ಯಾವುದೇ ಸೂಚನೆ ನೀಡದೆಜೋಪಡಿಗಳನ್ನು ಈಚೆಗೆ ನೆಲಸಮ ಮಾಡಲಾಗಿತ್ತು.</p>.<p>ದೇವರಬಿಸನಹಳ್ಳಿಯ ಕರಿಯಮ್ಮನ ಅಗ್ರಹಾರದ ಮಂತ್ರಿ ಇಸ್ಪನ್ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ಹೊಂದಿಕೊಂಡಿರುವ ಖುಲ್ಲಾ ಜಾಗದಲ್ಲಿ 300ಕ್ಕೂ ಹೆಚ್ಚು ಜೋಪಡಿಗಳಿದ್ದವು. ಆ ಪೈಕಿ 80ಕ್ಕೂ ಹೆಚ್ಚು ಜೋಪಡಿಗಳನ್ನು ಕೆಡವಲಾಗಿತ್ತು.</p>.<p>ಬಾಂಗ್ಲಾದೇಶದ ಪ್ರಜೆಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎನ್ನಲಾದ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ಈ ತೆರವು ಮಾಡಿದ್ದಾರೆ. ‘ಸ್ಥಳೀಯರಿಗೆ ಬಾಂಗ್ಲಾ ಪ್ರಜೆಗಳ ಪಟ್ಟ ಕಟ್ಟಿ ನಡೆಸಲಾದ ತೆರವು ಅನಧಿಕೃತವಾದದ್ದು’ ಎಂಬ ಆರೋಪ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>