ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗಿ: ನಾಲ್ವರು ಮರಣ

Last Updated 18 ಆಗಸ್ಟ್ 2022, 16:18 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಜ್ವರಕ್ಕೆ ಒಳಗಾದವರಲ್ಲಿ ನಾಲ್ವರು ಮೃತಪಟ್ಟಿರುವುದು ದೃಢಪಟ್ಟಿದೆ. ಈವರೆಗೆ ಡೆಂಗಿ ಜ್ವರಕ್ಕೆ ಒಳಗಾದವರ ಒಟ್ಟು ಸಂಖ್ಯೆ 5 ಸಾವಿರದ ಗಡಿ (4,926) ಸಮೀಪಿಸಿದೆ.

ಮಳೆಯಿಂದಾಗಿ ಡೆಂಗಿ ಜ್ವರಕ್ಕೆ ಒಳಪಡುವವರ ಸಂಖ್ಯೆ ತಿಂಗಳಿಂದ ಹೆಚ್ಚಳವಾಗಿದೆ. ಉಡುಪಿಯಲ್ಲಿ ಇಬ್ಬರು, ಚಿಕ್ಕಬಳ್ಳಾಪುರ ಹಾಗೂ ವಿಜಯಪುರದಲ್ಲಿ ತಲಾ ಒಬ್ಬರು ಡೆಂಗಿ ಜ್ವರದಿಂದ ಮೃತಪಟ್ಟಿದ್ದಾರೆ.ಈ ವರ್ಷ 90 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 39 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 34,987 ಮಂದಿಯಲ್ಲಿ ಡೆಂಗಿ ಶಂಕೆ ವ್ಯಕ್ತವಾಗಿದ್ದು, 1,058 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ.

ಕಳೆದ ವರ್ಷ7,189 ಡೆಂಗಿ ಪ್ರಕರಣಗಳು ದೃಢಪಟ್ಟಿದ್ದವು. ಜ್ವರ ಪೀಡಿತರಲ್ಲಿ ಐವರು ಮೃತಪಟ್ಟಿದ್ದರು. ಈ ವರ್ಷ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ವರದಿಯಾಗಿವೆ.

ಮೈಸೂರಿನಲ್ಲಿ 459, ಉಡುಪಿಯಲ್ಲಿ 416, ದಕ್ಷಿಣ ಕನ್ನಡದಲ್ಲಿ 224, ಚಿತ್ರದುರ್ಗದಲ್ಲಿ 213, ಶಿವಮೊಗ್ಗದಲ್ಲಿ 199, ಹಾಸನದಲ್ಲಿ 180, ಬೆಳಗಾವಿಯಲ್ಲಿ 161, ವಿಜಯಪುರದಲ್ಲಿ 160, ಮಂಡ್ಯದಲ್ಲಿ 155, ದಾವಣಗೆರೆಯಲ್ಲಿ 143, ಚಿಕ್ಕಬಳ್ಳಾಪುರದಲ್ಲಿ 139, ಕಲಬುರ್ಗಿಯಲ್ಲಿ 123, ಚಾಮರಾಜನಗರದಲ್ಲಿ 120, ಧಾರವಾಡದಲ್ಲಿ 119, ಕೋಲಾರದಲ್ಲಿ 118, ಕೊಪ್ಪಳದಲ್ಲಿ 115, ಚಿಕ್ಕಮಗಳೂರಿನಲ್ಲಿ 108 ಹಾಗೂ ಬಳ್ಳಾರಿಯಲ್ಲಿ 105 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ ನೂರಕ್ಕಿಂತ ಕಡಿಮೆಯಿದೆ.

28 ಜಿಲ್ಲೆಗಳಲ್ಲಿ ಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. 29 ಸಾವಿರಕ್ಕೂ ಅಧಿಕ ಮಂದಿ ಚಿಕೂನ್‌ಗುನ್ಯಾ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 17 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 1,057 ಮಂದಿ ಈ ಜ್ವರಕ್ಕೆ ಒಳಗಾಗಿರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT