ಬೆಂಗಳೂರು ನಗರ ಪ್ರದೇಶ ಜನರಿಗೆ ಡೆಂಗಿ ಸಾಂಕ್ರಾಮಿಕ ರೋಗದ ಹರಡುವಿಕೆ ಹಾಗೂ ನಿಯಂತ್ರಣ ಬಗ್ಗೆ ಅರಿವು ಮೂಡಿಸಲು ಎಂ.ಜಿ.ರಸ್ತೆಯ ಗಾಂಧಿ ಉದ್ಯಾನದಿಂದ ಪಾಲಿಕೆಯ ಕೇಂದ್ರ ಕಚೇರಿ ಆವರಣದವರೆಗೆ ಜಾಥಾ ನಡೆಯಿತು. ಪಾಲಿಕೆಯ ಅಧಿಕಾರಿಗಳು, ವೈದ್ಯರು, ಕಿರಿಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ಪದಾಧಿಕಾರಿಗಳು ಸೇರಿದಂತೆ 800ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.