ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನ ಗವಿಯಪ್ಪ ಬಿಜೆಪಿಗೆ: ಶ್ರೀರಾಮುಲು

Last Updated 3 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಹೊಸಪೇಟೆ: ಕಾಂಗ್ರೆಸ್ ಮುಖಂಡ ಎಚ್‌.ಆರ್‌.ಗವಿಯಪ್ಪ ಅವರು ಬಿಜೆಪಿ ಸೇರುವುದು ಖಚಿತ ಎಂದು ಸಂಸದ ಬಿ.ಶ್ರೀರಾಮುಲು ಶನಿವಾರ ಇಲ್ಲಿ ಹೇಳಿದರು.

‘ಗವಿಯಪ್ಪ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರು ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಕೇಳುತ್ತಿದ್ದು, ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಅತ್ಯಂತ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಾಗುವುದು’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆನಂದ ಸಿಂಗ್‌ ಅವರು ಬಿಜೆಪಿಯಿಂದ ಎಲ್ಲವನ್ನೂ ಅನುಭವಿಸಿದ್ದಾರೆ. ಎರಡು ಅವಧಿಗೆ ಶಾಸಕ, ಸಚಿವರಾಗಿದ್ದಾರೆ. ಇಷ್ಟೆಲ್ಲ ಅಧಿಕಾರ ಸಿಕ್ಕರೂ ಪಕ್ಷ ಬದಲಿಸಿರುವುದು ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT