ಮಂಗಳವಾರ, 3 ಮಾರ್ಚ್ 2026
×
ADVERTISEMENT

ಕೊಳೆ ಬಟ್ಟೆ ಧರಿಸಿ ಬಂದಿದ್ದ ವ್ಯಕ್ತಿಗೆ ನಮ್ಮ ಮೆಟ್ರೊ ಪ್ರಯಾಣಕ್ಕೆ ನಿರಾಕರಣೆ!

ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ಘಟನೆ: ಬಿಎಂಆರ್‌ಸಿಎಲ್ ಸ್ಪಷ್ಟನೆ: ಭದ್ರತಾ ಮೇಲ್ವಿಚಾರಕ ಸೇವೆಯಿಂದ ವಜಾ
Published : 26 ಫೆಬ್ರುವರಿ 2024, 9:48 IST
Last Updated : 26 ಫೆಬ್ರುವರಿ 2024, 9:48 IST
ADVERTISEMENT
ಫಾಲೋ ಮಾಡಿ
Comments
ಘಟನೆ ವಿವರ:
‘ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿಗೆ ಬಂದಿದ್ದರು. ಕೆಲಸದ ನಿಮಿತ್ತ ರಾಜಾಜಿನಗರಕ್ಕೆ ಬಂದಿದ್ದ ಅವರು ಮೆಟ್ರೊ ಮೂಲಕ ಮೆಜೆಸ್ಟಿಕ್‌ಗೆ ಹೊರಟಿದ್ದರು. ತಲೆ ಮೇಲೆ ಬಟ್ಟೆಯ ಗಂಟು ಹೊತ್ತಿದ್ದರು. ಬಟ್ಟೆಗಳು ಗಲೀಜಾಗಿದ್ದವು. ಸರದಿಯಲ್ಲಿ ನಿಂತು ಟಿಕೆಟ್ ಪಡೆದು ನಿಲ್ದಾಣದೊಳಗೆ ತೆರಳುತ್ತಿದ್ದರು. ಪ್ರವೇಶ ದ್ವಾರದಲ್ಲಿ ಅವರನ್ನು ತಡೆದಿದ್ದ ಸಿಬ್ಬಂದಿ, ‘ನಿನ್ನ ಬಟ್ಟೆಗಳು ಗಲೀಜಾಗಿವೆ. ನಿಲ್ದಾಣದೊಳಗೆ ಬಿಡುವುದಿಲ್ಲ. ಹೊರಗೆ ಹೋಗು’ ಎಂದು ಏರುಧ್ವನಿಯಲ್ಲಿ ಬೆದರಿಸಿದ್ದರು. ಮುಗ್ಧರಾಗಿದ್ದ ವ್ಯಕ್ತಿಗೆ ದಿಕ್ಕು ತೋಚದಂತಾಗಿತ್ತು. ಹಿಂದಿ ಮಾತನಾಡುತ್ತಿದ್ದ ವ್ಯಕ್ತಿ, ಒಳಗೆ ಬಿಡುವಂತೆ ಬೇಡಿಕೊಂಡರೂ ಸಿಬ್ಬಂದಿ ಬಿಟ್ಟಿರಲಿಲ್ಲ’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT