<p><strong>ಬೆಂಗಳೂರು:</strong> ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಶನಿವಾರ ಮೃತಪಟ್ಟಿದ್ದಾರೆ.</p>.<p>ಮಂಜುನಾಥ್ ಎಂಬುವರು ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಹಲವು ಆಸ್ಪತ್ರೆಗಳ ಕದ ತಟ್ಟಿದ್ದರು. ಆದರೆ, ಹಾಸಿಗೆ ಖಾಲಿ ಇಲ್ಲ ಎಂಬ ಕಾರಣಕ್ಕೆ ದಾಖಲಿಸಿಕೊಂಡಿರಲಿಲ್ಲ.</p>.<p>ಶನಿವಾರ ಮಂಜುನಾಥ್ ಅವರ ಆರೋಗ್ಯ ತೀರಾ ಹದಗೆಟ್ಟಾಗ ವೈದ್ಯರನ್ನು ಕಾಡಿ ಬೇಡಿ ವಿಕ್ರಮ್ ಆಸ್ಪತ್ರೆಗೆ ಅವರ ಪತ್ನಿ ದಾಖಲಿಸಿದ್ದರು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಿದ 15 ನಿಮಿಷದಲ್ಲಿ ಅವರು ಮೃತಪಟ್ಟಿದ್ದಾರೆ.</p>.<p>ಮೃತ ವ್ಯಕ್ತಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ನಂತರ ಮೃತ ದೇಹವನ್ನು ಕುಟುಂಬದವರಿಗೆ ಒಪ್ಪಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ.</p>.<p>ಮನೆಯಲ್ಲಿ ಇಬ್ಬರು ಪುಟ್ಟ ಮಕ್ಕಳನ್ನು ಬಿಟ್ಟು ಬಂದಿರುವ ಮಂಜುನಾಥ್ ಅವರ ಪತ್ನಿ ಒಬ್ಬಂಟಿಯಾಗಿ ಆಸ್ಪತ್ರೆ ಬಳಿಯೇ ಕುಳಿತಿದ್ದಾರೆ. ‘ಸಂಬಂಧಿಕರು ದೂರವಾಣಿ ಮೂಲಕವೇ ಸಾಂತ್ವಾನ ಹೇಳುತ್ತಿದ್ದು, ಏನು ಮಾಡಬೇಕು ಎಂಬುದೇ ತೋಚುತ್ತಿಲ್ಲ’ ಎಂದು ಅವರು ಕಣ್ಣೀರಿಟ್ಟರು.</p>.<p>ಇನ್ನೊಂದೆಡೆ ಕೆಂಗೇರಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯನ್ನು ಒಂದು ದಿನ ಕಳೆದರೂ ಆಸ್ಪತ್ರೆಗೆ ದಾಖಲಾಗಲು ಸಾಧ್ಯವಾಗದೆ ಪರದಾಡಿದರು.</p>.<p>‘ಸೋಂಕು ಇರುವುದನ್ನು ಖಚಿತಪಡಿಸಿದ ಬಿಬಿಎಂಪಿ ಸಿಬ್ಬಂದಿ, ಕರೆದೊಯ್ಯಲು ಬಂದಿಲ್ಲ. ಕೆಮ್ಮು ಮತ್ತು ಉಸಿರಾಟದ ತೊಂದರೆ ಹೆಚ್ಚಾಗುತ್ತಿದೆ’ ಎಂದು ಅವರು ದೂರವಾಣಿ ಮೂಲಕ ಮಾಧ್ಯಮಗಳ ಬಳಿ ಅಳಲು ತೋಡಿಕೊಂಡರು.</p>.<p>ಕಲಾಸಿಪಾಳ್ಯದಲ್ಲಿ ಸೋಂಕಿತ ವ್ಯಕ್ತಿ ಮೃತಪಟ್ಟು ಒಂದು ದಿನ ಕಳೆದರೂ ಮೃತದೇಹವನ್ನು ಬಿಬಿಎಂಪಿ ಸಿಬ್ಬಂದಿ ಸ್ಥಳಾಂತರಿಸಿಲ್ಲ. ಮನೆಯ ಬಳಿ ಸ್ಯಾನಿಟೈಸ್ ಮಾಡಿದ್ದರೂ ಮೃತದೇಹ ಮನೆಯಲ್ಲೇ ಇರುವುದರಿಂದ ಅಕ್ಕ–ಪಕ್ಕದ ನಿವಾಸಿಗಳು ಆತಂಕ ಹೆಚ್ಚಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಶನಿವಾರ ಮೃತಪಟ್ಟಿದ್ದಾರೆ.</p>.<p>ಮಂಜುನಾಥ್ ಎಂಬುವರು ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಹಲವು ಆಸ್ಪತ್ರೆಗಳ ಕದ ತಟ್ಟಿದ್ದರು. ಆದರೆ, ಹಾಸಿಗೆ ಖಾಲಿ ಇಲ್ಲ ಎಂಬ ಕಾರಣಕ್ಕೆ ದಾಖಲಿಸಿಕೊಂಡಿರಲಿಲ್ಲ.</p>.<p>ಶನಿವಾರ ಮಂಜುನಾಥ್ ಅವರ ಆರೋಗ್ಯ ತೀರಾ ಹದಗೆಟ್ಟಾಗ ವೈದ್ಯರನ್ನು ಕಾಡಿ ಬೇಡಿ ವಿಕ್ರಮ್ ಆಸ್ಪತ್ರೆಗೆ ಅವರ ಪತ್ನಿ ದಾಖಲಿಸಿದ್ದರು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಿದ 15 ನಿಮಿಷದಲ್ಲಿ ಅವರು ಮೃತಪಟ್ಟಿದ್ದಾರೆ.</p>.<p>ಮೃತ ವ್ಯಕ್ತಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ನಂತರ ಮೃತ ದೇಹವನ್ನು ಕುಟುಂಬದವರಿಗೆ ಒಪ್ಪಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ.</p>.<p>ಮನೆಯಲ್ಲಿ ಇಬ್ಬರು ಪುಟ್ಟ ಮಕ್ಕಳನ್ನು ಬಿಟ್ಟು ಬಂದಿರುವ ಮಂಜುನಾಥ್ ಅವರ ಪತ್ನಿ ಒಬ್ಬಂಟಿಯಾಗಿ ಆಸ್ಪತ್ರೆ ಬಳಿಯೇ ಕುಳಿತಿದ್ದಾರೆ. ‘ಸಂಬಂಧಿಕರು ದೂರವಾಣಿ ಮೂಲಕವೇ ಸಾಂತ್ವಾನ ಹೇಳುತ್ತಿದ್ದು, ಏನು ಮಾಡಬೇಕು ಎಂಬುದೇ ತೋಚುತ್ತಿಲ್ಲ’ ಎಂದು ಅವರು ಕಣ್ಣೀರಿಟ್ಟರು.</p>.<p>ಇನ್ನೊಂದೆಡೆ ಕೆಂಗೇರಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯನ್ನು ಒಂದು ದಿನ ಕಳೆದರೂ ಆಸ್ಪತ್ರೆಗೆ ದಾಖಲಾಗಲು ಸಾಧ್ಯವಾಗದೆ ಪರದಾಡಿದರು.</p>.<p>‘ಸೋಂಕು ಇರುವುದನ್ನು ಖಚಿತಪಡಿಸಿದ ಬಿಬಿಎಂಪಿ ಸಿಬ್ಬಂದಿ, ಕರೆದೊಯ್ಯಲು ಬಂದಿಲ್ಲ. ಕೆಮ್ಮು ಮತ್ತು ಉಸಿರಾಟದ ತೊಂದರೆ ಹೆಚ್ಚಾಗುತ್ತಿದೆ’ ಎಂದು ಅವರು ದೂರವಾಣಿ ಮೂಲಕ ಮಾಧ್ಯಮಗಳ ಬಳಿ ಅಳಲು ತೋಡಿಕೊಂಡರು.</p>.<p>ಕಲಾಸಿಪಾಳ್ಯದಲ್ಲಿ ಸೋಂಕಿತ ವ್ಯಕ್ತಿ ಮೃತಪಟ್ಟು ಒಂದು ದಿನ ಕಳೆದರೂ ಮೃತದೇಹವನ್ನು ಬಿಬಿಎಂಪಿ ಸಿಬ್ಬಂದಿ ಸ್ಥಳಾಂತರಿಸಿಲ್ಲ. ಮನೆಯ ಬಳಿ ಸ್ಯಾನಿಟೈಸ್ ಮಾಡಿದ್ದರೂ ಮೃತದೇಹ ಮನೆಯಲ್ಲೇ ಇರುವುದರಿಂದ ಅಕ್ಕ–ಪಕ್ಕದ ನಿವಾಸಿಗಳು ಆತಂಕ ಹೆಚ್ಚಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>