ಉಪಲೋಕಾಯುಕ್ತ ಹುದ್ದೆ ಖಾಲಿ ಇದೆ ಎಂದು 2019ರಲ್ಲಿ ವಕೀಲ ಎಸ್. ಉಮಾಪತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಬಾಕಿ ಇರುವಾಗ 2019ರ ನವೆಂಬರ್ನಲ್ಲಿ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರನ್ನು ಉಪಲೋಕಾಯುಕ್ತ ಹುದ್ದೆಗೆ ನೇಮಕ ಮಾಡಿಲಾಗಿದೆ. ಮತ್ತೊಬ್ಬ ಉಪಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಎನ್. ಆನಂದ್ ಅವರು2020ರ ಡಿಸೆಂಬರ್ನಲ್ಲಿ ನಿವೃತ್ತಿ ಹೊಂದಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿತು.