<p><strong>ಬೆಂಗಳೂರು</strong>: ರಾಜರಾಜೇಶ್ವರಿ ನಗರ ವಲಯದಲ್ಲಿ ಆರೋಗ್ಯಾಧಿಕಾರಿಯಾಗಿದ್ದಾಗ ತಮ್ಮ ಮಗನ ಒಡೆತನದ ನಕಲಿ ಸಂಸ್ಥೆಗೆ ಸಾಮಗ್ರಿ ವಿತರಣೆ ಹಾಗೂ ವೈದ್ಯರನ್ನು ಒದಗಿಸಲು ಕಾರ್ಯಾದೇಶ ನೀಡಿ ಕರ್ತವ್ಯಲೋಪ ಎಸಗಿರುವ ಡಾ. ಎಸ್.ಕೆ. ಸವಿತಾ ಅವರಿಗೆ ನಗರಾಭಿವೃದ್ಧಿ ಇಲಾಖೆ ನೋಟಿಸ್ ಜಾರಿ ಮಾಡಿದೆ.</p><p>‘2022ರ ಜನವರಿ 5ರಿಂದ ಮೇ 23ರವರೆಗೆ ರಾಜರಾಜೇಶ್ವರಿ ನಗರ ವಲಯದಲ್ಲಿ ಆರೋಗ್ಯಾಧಿಕಾರಿಯಾಗಿದ್ದಾಗ ಸವಿತಾ ಅವರು ತಮ್ಮ ಮಗನಾದ ಸಿ. ಸಿದ್ದರಾಜು ಚಿರಾಗ್ ಒಡೆತನದ ಎವಿಎಸ್ ಎಂಟರ್ಪ್ರೈಸಸ್ ಎಂಬ ನಕಲಿ ಸಂಸ್ಥೆಗೆ ಕಾನೂನುಬಾಹಿರವಾಗಿ ಕಾರ್ಯಾದೇಶ ನೀಡಿ ಅಕ್ರಮ ಎಸಗಿದ್ದಾರೆ.</p><p>ಅಲ್ಲದೆ, ಸಿಬ್ಬಂದಿಗೆ ವೇತನ ಪಾವತಿಸದೆ ಲೋಪ ಎಸಗಿದ್ದಾರೆ. ಕಾರ್ಯಾದೇಶ ನೀಡಿರುವ ಸಂಸ್ಥೆಯ ಮಾಲೀಕರು ತಮ್ಮ ಮಗನಾಗಿರುವ ಬಗ್ಗೆ ಲಿಖಿತ ಹೇಳಿಕೆ ನೀಡಲು ರಾಜರಾಜೇಶ್ವರಿ ನಗರ ವಲಯದ ಜಂಟಿ ಆಯುಕ್ತರು 2023ರಂದು ಪತ್ರ ನೀಡಿದ್ದರೂ ವಿವರಣೆ ಸಲ್ಲಿಸಿಲ್ಲ’ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.</p><p>‘ನಾಗರಿಕ ಸೇವಾ ನಡತೆ ನಿಯಮಗಳ ಉಲ್ಲಂಘನೆ ಮಾಡಿದ್ದು, ಗಂಭೀರ ಕರ್ತವ್ಯ ಲೋಪ ಎಸಗಿರುವ ನಿಮ್ಮ ವಿರುದ್ಧ ಇಲಾಖೆ ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಲಾಗಿದೆ.</p><p>‘ಡಾ. ಎಸ್.ಕೆ. ಸವಿತಾ ಅವರಿಗೆ ಕಾರಣ ಕೇಳುವ ನೋಟಿಸ್ ಅನ್ನು ನೀಡಿ, ಅವರಿಂದ ದಿನಾಂಕ ಸಹಿತ ಸಹಿ ಪಡೆದು ಕಳುಹಿಸಿ ಕೊಡಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜರಾಜೇಶ್ವರಿ ನಗರ ವಲಯದಲ್ಲಿ ಆರೋಗ್ಯಾಧಿಕಾರಿಯಾಗಿದ್ದಾಗ ತಮ್ಮ ಮಗನ ಒಡೆತನದ ನಕಲಿ ಸಂಸ್ಥೆಗೆ ಸಾಮಗ್ರಿ ವಿತರಣೆ ಹಾಗೂ ವೈದ್ಯರನ್ನು ಒದಗಿಸಲು ಕಾರ್ಯಾದೇಶ ನೀಡಿ ಕರ್ತವ್ಯಲೋಪ ಎಸಗಿರುವ ಡಾ. ಎಸ್.ಕೆ. ಸವಿತಾ ಅವರಿಗೆ ನಗರಾಭಿವೃದ್ಧಿ ಇಲಾಖೆ ನೋಟಿಸ್ ಜಾರಿ ಮಾಡಿದೆ.</p><p>‘2022ರ ಜನವರಿ 5ರಿಂದ ಮೇ 23ರವರೆಗೆ ರಾಜರಾಜೇಶ್ವರಿ ನಗರ ವಲಯದಲ್ಲಿ ಆರೋಗ್ಯಾಧಿಕಾರಿಯಾಗಿದ್ದಾಗ ಸವಿತಾ ಅವರು ತಮ್ಮ ಮಗನಾದ ಸಿ. ಸಿದ್ದರಾಜು ಚಿರಾಗ್ ಒಡೆತನದ ಎವಿಎಸ್ ಎಂಟರ್ಪ್ರೈಸಸ್ ಎಂಬ ನಕಲಿ ಸಂಸ್ಥೆಗೆ ಕಾನೂನುಬಾಹಿರವಾಗಿ ಕಾರ್ಯಾದೇಶ ನೀಡಿ ಅಕ್ರಮ ಎಸಗಿದ್ದಾರೆ.</p><p>ಅಲ್ಲದೆ, ಸಿಬ್ಬಂದಿಗೆ ವೇತನ ಪಾವತಿಸದೆ ಲೋಪ ಎಸಗಿದ್ದಾರೆ. ಕಾರ್ಯಾದೇಶ ನೀಡಿರುವ ಸಂಸ್ಥೆಯ ಮಾಲೀಕರು ತಮ್ಮ ಮಗನಾಗಿರುವ ಬಗ್ಗೆ ಲಿಖಿತ ಹೇಳಿಕೆ ನೀಡಲು ರಾಜರಾಜೇಶ್ವರಿ ನಗರ ವಲಯದ ಜಂಟಿ ಆಯುಕ್ತರು 2023ರಂದು ಪತ್ರ ನೀಡಿದ್ದರೂ ವಿವರಣೆ ಸಲ್ಲಿಸಿಲ್ಲ’ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.</p><p>‘ನಾಗರಿಕ ಸೇವಾ ನಡತೆ ನಿಯಮಗಳ ಉಲ್ಲಂಘನೆ ಮಾಡಿದ್ದು, ಗಂಭೀರ ಕರ್ತವ್ಯ ಲೋಪ ಎಸಗಿರುವ ನಿಮ್ಮ ವಿರುದ್ಧ ಇಲಾಖೆ ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಲಾಗಿದೆ.</p><p>‘ಡಾ. ಎಸ್.ಕೆ. ಸವಿತಾ ಅವರಿಗೆ ಕಾರಣ ಕೇಳುವ ನೋಟಿಸ್ ಅನ್ನು ನೀಡಿ, ಅವರಿಂದ ದಿನಾಂಕ ಸಹಿತ ಸಹಿ ಪಡೆದು ಕಳುಹಿಸಿ ಕೊಡಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>