ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು ಅವರು, ‘ಕ್ಷೇತ್ರದಲ್ಲಿ 6 ಲಕ್ಷಕ್ಕೂ ಅಧಿಕ ಜನಸಂಖ್ಯೆಯಿದೆ. ಕ್ಷೇತ್ರದೆಲ್ಲೆಡೆ ನೀರಿನ ಸಮಸ್ಯೆಯಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಲಮಂಡಳಿ ಅಧ್ಯಕ್ಷರ ಗಮನಕ್ಕೆ ತರಲಾಗಿತ್ತು. ಸಿಎಂ ಮತ್ತು ಡಿಸಿಎಂ ಅವರಿಗೂ ಎರಡು ಬಾರಿ ಪತ್ರ ಬರೆದು ಗಮನ ಸೆಳೆಯಲಾಗಿತ್ತು. ಆದರೂ ಪ್ರಯೋಜನವಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.