‘ಕೋವಿಡ್ನಿಂದದೇಶದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ಜನರ ನೆರವಿಗೆ ಧಾವಿಸಬೇಕಿದೆ.ಆದರೆ, ಜನರ ಕಷ್ಟದ ಪರಿಸ್ಥಿತಿಯ ಲಾಭ ಪಡೆದು, ತಮ್ಮ ವರ್ಗ ಬಂಧುಗಳಿಗೆ ಎಲ್ಲ ರೀತಿಯ ಅನುಕೂಲ ಮಾಡಿಕೊಡಲು ಸ್ವತಃ ಸರ್ಕಾರವೇ ಟೊಂಕ ಕಟ್ಟಿ ನಿಂತಿದೆ.ದೇಶದ ಬೆನ್ನೆಲುಬು ಆಗಿರುವ ರೈತರ ಬದುಕಿಗೆ ಬಾರುಕೋಲಿನಿಂದ ಬಾರಿಸಿದಂತೆ ಸುಗ್ರೀವಾಜ್ಞೆಗಳ ಮೂಲಕ ಕಾನೂನುಗಳಿಗೆ ತಿದ್ದುಪಡಿ ತರುತ್ತಿರುವುದು ಖಂಡನೀಯ’ ಎಂದು ಸಂಘಟನೆ ತಿಳಿಸಿದೆ.