<p>ಕೆಂಗೇರಿ: ‘ದೃಢ ಸಂಕಲ್ಪ ಹಾಗೂ ಶ್ರಮದೊಂದಿಗೆ ಸರಳತೆ, ಸಜ್ಜನಿಕೆ ಮೈಗೂಡಿಸಿಕೊಂಡರೆ ಯಶಸ್ಸು ನಮ್ಮದಾಗುತ್ತದೆ’ ಎಂದು ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ಬಿಜಿಎಸ್ ಸಮೂಹ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ಬಿಜಿಎಸ್ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಣಕ್ಕೆ ನೀಡುವ ಮಹತ್ವ ಕ್ರೀಡೆಗೂ ದೊರೆಯಬೇಕು. ಕ್ರೀಡೆ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ದಿಸುವುದರೊಂದಿಗೆ ದೇಶದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ಗೋವಿಂದರಾಜು ಹೇಳಿದರು.</p>.<p>ಚಿತ್ರನಟ ಯಶ್ ಮಾತನಾಡಿ, ‘ಒಬ್ಬ ವ್ಯಕ್ತಿಯ ಅವಿರತ ಶ್ರಮ, ಬದ್ಧತೆಯಿಂದ ಒಂದು ಉತ್ತಮ ಸಂಸ್ಥೆ ರೂಪುಗೊಳ್ಳಲು ಸಾಧ್ಯ. ಅದೇ ರೀತಿ ಬಾಲಗಂಗಾಧರ ಸ್ವಾಮೀಜಿ ಅವರ ಅವಿರತ ಪ್ರಯತ್ನದಿಂದ ಬಿಜಿಎಸ್ ದೇಶದ ಉನ್ನತ ಶಿಕ್ಷಣ ಸಂಸ್ಥೆಯಾಗಿ ರೂಪುಗೊಂಡಿದೆ’ ಎಂದು ಶ್ಲಾಘಿಸಿದರು. </p>.<p>ಬಿಜಿಎಸ್ ಸಂಸ್ಥೆಯ ಸಾಧಕ ಪ್ರಾಧ್ಯಾಪಕರಾದ ಸವಿತಾ ಸುವರ್ಣ ಹಾಗೂ ಶಾಂತಕುಮಾರ್ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಜಿಎಸ್ ಮತ್ತು ಎಸ್ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶನಾಥ ಸ್ವಾಮೀಜಿ, ಶಾಸಕ ಎಸ್.ಟಿ.ಸೋಮಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಂಗೇರಿ: ‘ದೃಢ ಸಂಕಲ್ಪ ಹಾಗೂ ಶ್ರಮದೊಂದಿಗೆ ಸರಳತೆ, ಸಜ್ಜನಿಕೆ ಮೈಗೂಡಿಸಿಕೊಂಡರೆ ಯಶಸ್ಸು ನಮ್ಮದಾಗುತ್ತದೆ’ ಎಂದು ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ಬಿಜಿಎಸ್ ಸಮೂಹ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ಬಿಜಿಎಸ್ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಣಕ್ಕೆ ನೀಡುವ ಮಹತ್ವ ಕ್ರೀಡೆಗೂ ದೊರೆಯಬೇಕು. ಕ್ರೀಡೆ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ದಿಸುವುದರೊಂದಿಗೆ ದೇಶದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ಗೋವಿಂದರಾಜು ಹೇಳಿದರು.</p>.<p>ಚಿತ್ರನಟ ಯಶ್ ಮಾತನಾಡಿ, ‘ಒಬ್ಬ ವ್ಯಕ್ತಿಯ ಅವಿರತ ಶ್ರಮ, ಬದ್ಧತೆಯಿಂದ ಒಂದು ಉತ್ತಮ ಸಂಸ್ಥೆ ರೂಪುಗೊಳ್ಳಲು ಸಾಧ್ಯ. ಅದೇ ರೀತಿ ಬಾಲಗಂಗಾಧರ ಸ್ವಾಮೀಜಿ ಅವರ ಅವಿರತ ಪ್ರಯತ್ನದಿಂದ ಬಿಜಿಎಸ್ ದೇಶದ ಉನ್ನತ ಶಿಕ್ಷಣ ಸಂಸ್ಥೆಯಾಗಿ ರೂಪುಗೊಂಡಿದೆ’ ಎಂದು ಶ್ಲಾಘಿಸಿದರು. </p>.<p>ಬಿಜಿಎಸ್ ಸಂಸ್ಥೆಯ ಸಾಧಕ ಪ್ರಾಧ್ಯಾಪಕರಾದ ಸವಿತಾ ಸುವರ್ಣ ಹಾಗೂ ಶಾಂತಕುಮಾರ್ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಜಿಎಸ್ ಮತ್ತು ಎಸ್ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶನಾಥ ಸ್ವಾಮೀಜಿ, ಶಾಸಕ ಎಸ್.ಟಿ.ಸೋಮಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>