ಕರೆಮ್ಮ ಜಿ. ನಾಯಕ್, ‘2005ರಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮೂಲಕ ರಾಜಕೀಯ ಪ್ರವೇಶಿಸಿದೆ. ದೇವೇಗೌಡರು ನನ್ನನ್ನು ಗುರುತಿಸಿ, ವಿಧಾನಸಭೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿದಾಗ ಅಲ್ಪ ಅಂತರದಲ್ಲಿ ಸೋಲನ್ನು ಕಂಡಿದ್ದೆ. ಕ್ಷೇತ್ರದಲ್ಲಿ ಜನರಿಗೆ ಸ್ಪಂದಿಸಿದ್ದರಿಂದ ಈ ಬಾರಿ ಅಭೂತಪೂರ್ವ ಗೆಲುವು ಕಂಡೆ. ನಾನು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ಎಲ್ಲಾ ರಂಗದಲ್ಲಿಯೂ ಹಿಂದುಳಿದಿದ್ದು, ಇಲ್ಲಿನ ಅಭಿವೃದ್ಧಿಗೆ ಪಣ ತೊಡುತ್ತೇನೆ’ ಎಂದರು.