ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KIAL: ವಿಮಾನ ವ್ಯತ್ಯಯ- ನಿಲ್ದಾಣದಲ್ಲಿ ಜನ ದಟ್ಟಣೆ

Last Updated 10 ಫೆಬ್ರುವರಿ 2023, 21:33 IST
ಅಕ್ಷರ ಗಾತ್ರ

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ವಿಮಾನ ಹಾರಾಟದಲ್ಲಿ ವ್ಯತ್ಯಯವಾದ ಕಾರಣ ಸಾಕಷ್ಟು ಜನ ದಟ್ಟಣೆ ಉಂಟಾಯಿತು.

ಏಷ್ಯಾದ ಅತಿದೊಡ್ಡ ಏರ್‌ ಶೋ ‘ಏರೋ ಇಂಡಿಯಾ’ ಇಲ್ಲಿಗೆ ಸಮೀಪದ ಯಲಹಂಕ ವಾಯುನೆಲೆಯಲ್ಲಿ ಇದೇ 13ರಿಂದ 17ರ ವರೆಗೂ ನಡೆಯಲಿದೆ. ಸುರಕ್ಷತೆಯ ದೃಷ್ಟಿಯಿಂದ ವಾಣಿಜ್ಯ ವಿಮಾನಗಳ ಸೇವೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಪ್ರಯಾಣಿಕರು ನಿರ್ಗಮನ ದ್ವಾರಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದರು.

ಈ ಕುರಿತು ಟ್ವಿಟರ್‌ ಮೂಲಕ ಪ್ರಯಾಣಿಕರು ವಿಡಿಯೊ, ಫೋಟೊಗಳನ್ನು ಹಂಚಿಕೊಂಡಿದ್ದು, ವಿಮಾನಯಾನ ಸಚಿವಾಲಯವೂ ತ್ವರಿತವಾಗಿ ಸಮಸ್ಯೆ ಬಗೆಹರಿಸಿ, ಸೂಕ್ತವಾದ ಮುನ್ನೆಚ್ಚರಿಕಾ ಯೋಜನೆಗಳನ್ನು ಕೈಗೊಳ್ಳಬೇಕು. ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರಿಗೆ ಅನುಕೂಲ ವಾತಾವರಣ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT